July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.29-ಮಾ.2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನಕ್ಕೆ ಕೊಕ್ಕಡದ ಸಿಬಂತಿ ಪದ್ಮನಾಭ

ಬೆಳ್ತಂಗಡಿ: ಮಲೇಷ್ಯಾದ ಕೌಲಾಲಂಪುರದಲ್ಲಿ ಫೆ.29ರಿಂದ ಮಾರ್ಚ್‌ 2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನದಲ್ಲಿ ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ.ಕೆ.ವಿ. ಸಿಬಂತಿ ಪದ್ಮನಾಭ ಭಾಗವಹಿಸಲಿದ್ದಾರೆ.

‘ಆಗ್ನೆಯ ಏಷ್ಯಾ ರಾಷ್ಟ್ರಗಳಲ್ಲಿ ಮಾಧ್ಯಮ, ಸುಸ್ಥಿರತೆ, ಅಭಿವೃದ್ಧಿ ಮತ್ತು ಪ್ರಭುತ್ವದ ಚರ್ಚೆಗಳು’ ಎಂಬ ವಿಷಯದ ಮೇಲೆ ನಡೆಯುವ ಈ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಂಘಟನೆ ಹಾಗೂ ಸನ್‌ವೇ ವಿಶ್ವವಿದ್ಯಾಲಯ ಜಂಟಿಯಾಗಿ ಆಯೋಜಿಸುತ್ತಿವೆ.ಸಮ್ಮೇಳನದಲ್ಲಿ ಪದ್ಮನಾಭ ಅವರು ‘ಮಹಿಳಾ ಸಬಲೀಕರಣದ ವೇದಿಕೆಯಾಗಿ ಸಾಂಪ್ರದಾಯಿಕ ರಂಗಭೂಮಿ ಯಕ್ಷಗಾನದ ಒಂದು ಅಧ್ಯಯನ’ ಕುರಿತು ಸಂಶೋಧನ ಪ್ರಬಂಧ ಮಂಡಿಸಲಿದ್ದಾರೆ.


ಸಿಬಂತಿ ಪದ್ಮನಾಭರವರು ಮೂಲತಃ ಕೊಕ್ಕಡ ಗ್ರಾಮದ ಸಿಬಂತಿಯವರಾಗಿದ್ದು, ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸ.ಕಿ.ಪ್ರಾ. ಶಾಲೆ ಮುಂಡೂರುಪಳಿಕೆ ಹಾಗೂ ಪಟ್ಟೂರಿನ ಶ್ರೀ ವಿಷ್ಣುಮೂರ್ತಿ ಅ.ಹಿ.ಪ್ರಾ.ಶಾಲೆಯಲ್ಲಿ ಪಡೆದಿರುತ್ತಾರೆ.

Related posts

ಚಾರ್ಮಾಡಿ ಗ್ರಾಮದ ಕುಂಡೊಟ್ಟುಗೆ ಲೋಕೋಪಯೋಗಿ ಸಚಿವರ ಭೇಟಿ ಸ್ಥಳೀಯರ ಅಹವಾಲು ಸ್ವೀಕಾರ

Suddi Udaya

ಜ.10: ವಿದ್ಯುತ್ ನಿಲುಗಡೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಶ್ರೀ ರಾಮ ಕ್ಷೇತ್ರ ಶ್ರೀಮಠದ ಸದ್ಗುರು ಸ್ವಾಮಿಗಳನ್ನು ಉತ್ತರಕಾಂಡದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದ ಹರಿದ್ವಾರದ ಶಾಸಕ ಮದನ ಕೌಸಿಕ

Suddi Udaya

ಬೆಳಾಲು ಶ್ರೀ ಧ.ಮಂ.ಅನುದಾನಿತ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆ, ಬೆಳ್ತಂಗಡಿ ಲಯನ್ಸ್ ಸೇವಾ ಸಂಸ್ಥೆ, ಲಿಯೋ ಕ್ಲಬ್ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!