25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಸವಾರನೊಬ್ಬ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಲಾಯಿಸಿ ಡಿಕ್ಕಿಗೊಳಿಸಿ ಬೈಕ್ ಸವಾರ ಪರಾರಿಯಾದ ಘಟನೆ ಬಳಂಜದಲ್ಲಿ ನಡೆದಿದೆ.

ಬಳಂಜ ಗ್ರಾಮದ ಪರಾರಿ ನಿವಾಸಿ ಸುಶೀಲ ಗಂಭೀರ ಗಾಯಗೊಂಡ ಮಹಿಳೆಯಾಗಿದ್ದು ಕೂಡಲೇ ಸ್ಥಳಿಯರಾದ ನಿತ್ಯಾನಂದ ಹೆಗ್ಡೆ ಮತ್ತು ರಮೇಶ್ ದೇವಾಡಿಗರವರು ಆಸ್ಪತ್ರೆಗೆ ದಾಖಲಿಸಿದ್ದಾರೆ.


ಡಿಕ್ಕಿಯ ರಭಸಕ್ಕೆ ಮಹಿಳೆಗೆ ಕೈ,ಕಾಲು,ತಲೆಗೆ ಗಂಭೀರ ಪ್ರಮಾಣದ ಗಾಯಗಳಾಗಿದೆ. ಬೆಳ್ತಂಗಡಿ ಹಾಗೂ ಉಜಿರೆಯ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ‌ ಆಸ್ಪತ್ರೆಗೆ ಸೇರಿಸಲಾಗಿದೆ.
ಈ ಸಂಬಂಧ ವೇಣೂರು ಪೋಲೀಸ್ ಠಾಣೆಯಲ್ಲಿ ಸುಶೀಲರವರು ದೂರು ನೀಡಿದ್ದು, ದೂರಿನಲ್ಲಿ ನಿರ್ಲಕ್ಷ್ಯತನದಿಂದ ಬೈಕ್ ಚಲಾಯುಸುತ್ತಿದ್ದ ವ್ಯಕ್ತಿಯನ್ನು ಜಾನ್ ಲೋಬೋ ಎಂದು ಗುರುತಿಸಲಾಗಿದೆ. ವಾಹನ ನಂಬ್ರ ಕೆಎ 21,ಯು 2946 ಆಗಿದೆ ಎಂದು ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ: ಚಂಪಿ ಆಟೋ ರಿಕ್ಷಾ ಚಾಲಕ ಶೇಖರ ನಿಧನ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿಯಿಂದ ಪುಸ್ತಕ ವಿತರಣೆ

Suddi Udaya

ನಾರಾವಿ: ಮಧುವನ ಕಾಂಪ್ಲೆಕ್ಸ್ ನಲ್ಲಿ ವಕ್ರಾಂಗಿ ಯುಪಿಐ ಮಿನಿ ಎಟಿಎಂ ಕೇಂದ್ರ ಶುಭಾರಂಭ

Suddi Udaya

ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದರಿಗೆ ಮೊಹರೆ ಹನುಮಂತರಾಯ ಪ್ರಶಸ್ತಿ

Suddi Udaya

ನಾಲ್ಕೂರು: ಅಸೌಖ್ಯದಿಂದ ತುಂಗಮ್ಮ ಮಂಗ್ಲುತ್ತ್ಯಾರು ನಿಧನ

Suddi Udaya

ಉಜಿರೆ: ಬೆನಕ ಹೆಲ್ತ್ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya
error: Content is protected !!