25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾ ಗೇರುಕಟ್ಟೆಯಲ್ಲಿ ವಶ: ಸ್ಕೂಟರ್ ಸಹಿತ ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ: ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ಬೆಳ್ತಂಗಡಿ ಪೊಲೀಸರು ಗೇರುಕಟ್ಟೆಯಲ್ಲಿವಶಪಡಿಸಿಕೊಂಡಿದ್ದು ಇಬ್ಬರನ್ನು ಬಂಧಿಸಿದ ಪ್ರಕರಣ ವರದಿಯಾಗಿದೆ.

ಗೇರುಕಟ್ಟೆ ನಿವಾಸಿ ಉಮ್ಮರ್ ಫಾರೂಕ್ ಹಾಗೂ ಮುಂಡಾಜೆ ಸೋಮಂದಡ್ಕ ನಿವಾಸಿ ಸತೀಶ್ ಯಾನೆ ಸ್ಕಾರ್ಪಿಯೋ ಸತೀಶ್ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಗೇರುಕಟ್ಟೆ ಸಮೀಪ ಓಡುರೊಟ್ಟು ಎಂಬಲ್ಲಿ ಕೆ..ಎ 70ಜೆ.5511ನಂಬರಿನ ಸ್ಕೂಟಿಯೊಂದಿಗೆ ಅನುಮಾನಾಸ್ಪದವಾಗಿ ನಿಂತಿರುವುದನ್ನು ನೋಡಿದ ಬೆಳ್ತಂಗಡಿ ಪಿ.ಎಸ್.ಐ ಚಂದ್ರಶೇಖರ್ ಹಾಗೂ ತಂಡ ತಡೆದು ವಿಚರಣೆ ನಡೆಸಿ ತಪಾಸಣೆ ನಡೆಸಿದಾಗ ಆರೋಪಿಗಳ ಬಳಿಯಿಂದ 2.10ಕೆ.ಜಿ ಗಾಂಜಾ ಅಲ್ಲದೆ ಸತೀಶ್ ಕೈಯಲ್ಲಿ 55ಗ್ರಾಂ ಗಾಂಜಾ ಪತ್ತೆಯಾಗಿದೆ.

ವಶಪಡಿಸಿಕೊಂಡಿರುವ ಒಟ್ಟು ಗಾಂಜಾದ ಮೌಲ್ಯ 51,000 ಎಂದು ಅಂದಾಜಿಸಲಾಗಿದೆ. ಗಾಂಜಾವನ್ನು ವಶಪಡಿಸಿಕೊಂಡ ಪೊಲೀಸರು,‌‌ ಗಾಂಜಾ ಸಾಗಾಟಕ್ಕೆ ಕೃತ್ಯಕ್ಕೆ ಬಳಸಿದ ಸ್ಕೂಟರ್ ನ್ನು ಆರೋಪಿಗಳೊಂದಿಗೆ ವಶಕ್ಕೆ ಪಡೆದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 25/2024 ಕಲಂ: 8( c ) ,20(b) NDPS ACT ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರರವರಿಂದ ಮತದಾನ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನ: ನಾರಾವಿಯ ಸಾನಿಧ್ಯ ರಾವ್‌ ರಾಜ್ಯಕ್ಕೆ ಪ್ರಥಮ

Suddi Udaya

ಕೊಯ್ಯೂರು- ಗೇರುಕಟ್ಟೆ ಮೂಲಕ ಬೆಳ್ತಂಗಡಿಗೆ ಬಸ್ಸು ಸೌಕರ್ಯಕ್ಕೆ ಮನವಿ

Suddi Udaya

ಆರೋಗ್ಯ ಸೇವೆಯ ಬೆನ್ನೆಲುಬಾದ ಆಶಾ ಕಾರ್ಯಕರ್ತೆಯರಿಗೆ ನ್ಯಾಯ ನೀಡಿ: ಭಾರತೀಯ ಮಜ್ದೂರು ಸಂಘ ಆಗ್ರಹ

Suddi Udaya

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

Suddi Udaya

ಸಿನಿಮಾ ರಂಗದ ಸಂಗೀತ ಕ್ಷೇತ್ರದಲ್ಲಿ ಮಿಂಚುತ್ತಿರುವ ಬಾರ್ಯದ ಕಲ್ಲಾಜೆಯ ನಿವಾಸಿ ಯುವ ಸಂಗೀತ ನಿರ್ದೇಶಕ ಪ್ರಸಾದ್ ಕೆ ಶೆಟ್ಟಿ

Suddi Udaya
error: Content is protected !!