July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾ ಗೇರುಕಟ್ಟೆಯಲ್ಲಿ ವಶ: ಸ್ಕೂಟರ್ ಸಹಿತ ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ: ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ಬೆಳ್ತಂಗಡಿ ಪೊಲೀಸರು ಗೇರುಕಟ್ಟೆಯಲ್ಲಿವಶಪಡಿಸಿಕೊಂಡಿದ್ದು ಇಬ್ಬರನ್ನು ಬಂಧಿಸಿದ ಪ್ರಕರಣ ವರದಿಯಾಗಿದೆ.

ಗೇರುಕಟ್ಟೆ ನಿವಾಸಿ ಉಮ್ಮರ್ ಫಾರೂಕ್ ಹಾಗೂ ಮುಂಡಾಜೆ ಸೋಮಂದಡ್ಕ ನಿವಾಸಿ ಸತೀಶ್ ಯಾನೆ ಸ್ಕಾರ್ಪಿಯೋ ಸತೀಶ್ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಗೇರುಕಟ್ಟೆ ಸಮೀಪ ಓಡುರೊಟ್ಟು ಎಂಬಲ್ಲಿ ಕೆ..ಎ 70ಜೆ.5511ನಂಬರಿನ ಸ್ಕೂಟಿಯೊಂದಿಗೆ ಅನುಮಾನಾಸ್ಪದವಾಗಿ ನಿಂತಿರುವುದನ್ನು ನೋಡಿದ ಬೆಳ್ತಂಗಡಿ ಪಿ.ಎಸ್.ಐ ಚಂದ್ರಶೇಖರ್ ಹಾಗೂ ತಂಡ ತಡೆದು ವಿಚರಣೆ ನಡೆಸಿ ತಪಾಸಣೆ ನಡೆಸಿದಾಗ ಆರೋಪಿಗಳ ಬಳಿಯಿಂದ 2.10ಕೆ.ಜಿ ಗಾಂಜಾ ಅಲ್ಲದೆ ಸತೀಶ್ ಕೈಯಲ್ಲಿ 55ಗ್ರಾಂ ಗಾಂಜಾ ಪತ್ತೆಯಾಗಿದೆ.

ವಶಪಡಿಸಿಕೊಂಡಿರುವ ಒಟ್ಟು ಗಾಂಜಾದ ಮೌಲ್ಯ 51,000 ಎಂದು ಅಂದಾಜಿಸಲಾಗಿದೆ. ಗಾಂಜಾವನ್ನು ವಶಪಡಿಸಿಕೊಂಡ ಪೊಲೀಸರು,‌‌ ಗಾಂಜಾ ಸಾಗಾಟಕ್ಕೆ ಕೃತ್ಯಕ್ಕೆ ಬಳಸಿದ ಸ್ಕೂಟರ್ ನ್ನು ಆರೋಪಿಗಳೊಂದಿಗೆ ವಶಕ್ಕೆ ಪಡೆದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 25/2024 ಕಲಂ: 8( c ) ,20(b) NDPS ACT ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮಡಂತ್ಯಾರು: ಮಾಲಾಡಿ ಬಿ ಎಂ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಹದಗೆಟ್ಟಿರುವ ಸೋಮಂತಡ್ಕ ಮಜಲು ರಸ್ತೆ : ಸಂಬಂಧ ಪಟ್ಟವರು ರಸ್ತೆಯ ದುರವಸ್ಥೆಯನ್ನು ಸರಿಪಡಿಸುವಂತೆ ಗ್ರಾಮಸ್ಥರ ಮನವಿ

Suddi Udaya

ಬುರುಡೆ ಚಿನ್ನಯ್ಯ ಕೋರ್ಟ್ ಗೆ ತಂದಿದ್ದ ಬುರುಡೆ ಪೋಟೋ ರಿವಿಲ್

Suddi Udaya

ರಬ್ಬರ್ ಬೆಳೆಗಾರರಿಗೆ ಪ್ರೋತ್ಸಾಹ ಧನ ಅಥವಾ ಬೆಂಬಲ ಬೆಲೆ ನೀಡುವ ಕುರಿತು ಸಂಸದರ ಮೂಲಕ ಕೇಂದ್ರ ಕೃಷಿ ಸಚಿವರಿಗೆ ರಬ್ಬರ್ ಸೊಸೈಟಿಯಿಂದ ಮನವಿ

Suddi Udaya

ವಿ.ಹಿಂ.ಪ. ಮತ್ತು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇಂದಬೆಟ್ಟು-ನಾವೂರು ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಕುದ್ರಡ್ಕ ಶ್ರೀ‌ ಮಹಾಗಣಪತಿ ಭಜನಾ ಮಂದಿರದಲ್ಲಿ ‌ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!