July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

ಉಜಿರೆ: “ಇಂದಿನ ವಿಜ್ಞಾನ, ನಾಳೆಯ ತಂತ್ರಜ್ಞಾನ. ವಿದ್ಯಾರ್ಥಿಗಳು ಹೊಸ ತನಿಖೆಗಳನ್ನು ಅಭಿವೃದ್ಧಿಪಡಿಸಬೇಕು ಆಗಲೇ ಆಲೋಚನೆಗಳನ್ನು ವ್ಯವಹಾರಕ್ಕೆ ಪರಿವರ್ತಿಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಉಪನಿಷತ್ ಪ್ರಾಚೀನ ಲಿಪಿಗಳಿಂದ ಹೊಸ ವಿಷಯಗಳನ್ನು ಕಂಡುಕೊಳ್ಳಬೇಕು” ಎಂದು ಉಜಿರೆಯ ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ಅಮರೇಶ್ ಹೆಬ್ಬಾರ್ ಹೇಳಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆಯಲ್ಲಿ ನಡೆದ ವಿಜ್ಞಾನ ದಿನಾಚರಣೆಯ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.

ರಾಷ್ಟ್ರೀಯ ಮಟ್ಟದ “ಎ.ಟಿ.ಎಲ್ ಮ್ಯಾರಥಾನ್ ಆಫ್ ದ ಇಯರ್ 2022-23” ಎಂಬ ಸ್ಪರ್ಧೆಯಲ್ಲಿ ಹತ್ತು ಸಾವಿರ ವಿಜ್ಞಾನ ಮಾದರಿಗಳ ಪೈಕಿ ಉತ್ತಮ 400 ಮಾದರಿಗಳಲ್ಲಿ ಆಯ್ಕೆ ಆಗಿ, ದಕ್ಷಿಣ ಕನ್ನಡದಿಂದ ಆಯ್ಕೆ ಆಗಿರುವ ಎರಡು ತಂಡಗಳಲ್ಲಿ ಒಂದಾಗಿರುವ ಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿ ಪವನ್ ಕೃಷ್ಣ ಮತ್ತು ಸೋಹನ್ ಶೆಟ್ಟಿ ಇವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ, ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ ಆಯೋಜಿಸಿ ಪ್ರಶಸ್ತಿ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ವಿಜ್ಞಾನ ಸಂಘದ ವಾರ್ಷಿಕ ಚಟುವಟಿಕೆಗಳ ವಾಚನ, ಮೂಢ ನಂಬಿಕೆಗಳ ಕುರಿತು ಕಿರು ಪ್ರಹಸನ ನೀಡಲಾಯಿತು.

ವಿಜ್ಞಾನ ಸಂಘದಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರು ಸ್ವಾಗತಿಸಿ, ವಿದ್ಯಾರ್ಥಿ ಅದ್ವೈತ್ ಡೋಂಗ್ರೆ ವಂದಿಸಿ, ಅಲ್ರಿಕ್ ಮತ್ತು ಆರ್ಯಮನ್ ನಿರೂಪಿಸಿದರು.

Related posts

ರೇಣುಕಾ ಪ್ರಸಾದ್ ರವರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಾನಕ್ಕೆ ಬೆಳ್ಳಿ ರಥ ಸಮರ್ಪಣೆ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವಾರ್ಷಿಕ ಮಹಾಸಭೆ

Suddi Udaya

ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಆಡಳಿತ ಮಂಡಳಿಗೆ ಚುನಾವಣೆ ಬೆಳ್ತಂಗಡಿ ಕ್ಷೇತ್ರದಿಂದ ಕುಶಾಲಪ್ಪ ಗೌಡ ಪೂವಾಜೆ ಅವಿರೋಧ ಆಯ್ಕೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ಗೆ ಆಯ್ಕೆ

Suddi Udaya

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನದ ಅಂಗವಾಗಿ ಮುಗೇರಡ್ಕ‌ ದೈವಸ್ಥಾನದಲ್ಲಿ‌ ಗಿಡ ನಾಟಿ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪೂಲ್ ಕ್ಯಾಂಪಸ್ ಡ್ರೈವ್

Suddi Udaya
error: Content is protected !!