23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

ಉಜಿರೆ: “ಇಂದಿನ ವಿಜ್ಞಾನ, ನಾಳೆಯ ತಂತ್ರಜ್ಞಾನ. ವಿದ್ಯಾರ್ಥಿಗಳು ಹೊಸ ತನಿಖೆಗಳನ್ನು ಅಭಿವೃದ್ಧಿಪಡಿಸಬೇಕು ಆಗಲೇ ಆಲೋಚನೆಗಳನ್ನು ವ್ಯವಹಾರಕ್ಕೆ ಪರಿವರ್ತಿಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಉಪನಿಷತ್ ಪ್ರಾಚೀನ ಲಿಪಿಗಳಿಂದ ಹೊಸ ವಿಷಯಗಳನ್ನು ಕಂಡುಕೊಳ್ಳಬೇಕು” ಎಂದು ಉಜಿರೆಯ ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ಅಮರೇಶ್ ಹೆಬ್ಬಾರ್ ಹೇಳಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆಯಲ್ಲಿ ನಡೆದ ವಿಜ್ಞಾನ ದಿನಾಚರಣೆಯ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.

ರಾಷ್ಟ್ರೀಯ ಮಟ್ಟದ “ಎ.ಟಿ.ಎಲ್ ಮ್ಯಾರಥಾನ್ ಆಫ್ ದ ಇಯರ್ 2022-23” ಎಂಬ ಸ್ಪರ್ಧೆಯಲ್ಲಿ ಹತ್ತು ಸಾವಿರ ವಿಜ್ಞಾನ ಮಾದರಿಗಳ ಪೈಕಿ ಉತ್ತಮ 400 ಮಾದರಿಗಳಲ್ಲಿ ಆಯ್ಕೆ ಆಗಿ, ದಕ್ಷಿಣ ಕನ್ನಡದಿಂದ ಆಯ್ಕೆ ಆಗಿರುವ ಎರಡು ತಂಡಗಳಲ್ಲಿ ಒಂದಾಗಿರುವ ಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿ ಪವನ್ ಕೃಷ್ಣ ಮತ್ತು ಸೋಹನ್ ಶೆಟ್ಟಿ ಇವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ, ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ ಆಯೋಜಿಸಿ ಪ್ರಶಸ್ತಿ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ವಿಜ್ಞಾನ ಸಂಘದ ವಾರ್ಷಿಕ ಚಟುವಟಿಕೆಗಳ ವಾಚನ, ಮೂಢ ನಂಬಿಕೆಗಳ ಕುರಿತು ಕಿರು ಪ್ರಹಸನ ನೀಡಲಾಯಿತು.

ವಿಜ್ಞಾನ ಸಂಘದಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರು ಸ್ವಾಗತಿಸಿ, ವಿದ್ಯಾರ್ಥಿ ಅದ್ವೈತ್ ಡೋಂಗ್ರೆ ವಂದಿಸಿ, ಅಲ್ರಿಕ್ ಮತ್ತು ಆರ್ಯಮನ್ ನಿರೂಪಿಸಿದರು.

Related posts

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 552 ನೇ ಸೇವಾ ಯೋಜನೆ ಹಸ್ತಾಂತರ: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ

Suddi Udaya

ಅಳದಂಗಡಿ: ಸೂಳಬೆಟ್ಟು ನಿವಾಸಿ ವಾಣಿ ಜೋಶಿ ನಿಧನ

Suddi Udaya

ಬಣಕಲ್ ಸಾಯಿಕೃಷ್ಣ ಹೆಲ್ತ್ ಸೆಂಟರ್ ನಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ನೇತ್ರ ತಪಾಸಣೆ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಮಾಜಮುಖಿ ಚಿಂತನೆಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಸ್ತುತ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಮತ್ತು ಆಡಳಿತ ಮಂಡಳಿಯ ಸದಸ್ಯರಿಂದ ನಾಳೆ ಪ್ರಶಸ್ತಿ ಸ್ವೀಕಾರ

Suddi Udaya

ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಮನೆ ನಿರ್ಮಾಣ

Suddi Udaya
error: Content is protected !!