22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜಕೀಯವರದಿ

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

ಬೆಂಗಳೂರು: ತುಳುವಿಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವ ಬಗ್ಗೆ ಈಗಾಗಲೇ ಎರಡು ಭಾಷೆಗಳಿಗೆ ರಾಜ್ಯ ಭಾಷೆಯ ಸ್ಥಾನಮಾನ ನೀಡಿರುವ ಬಿಹಾರ, ಪಶ್ಚಿಮ ಬಂಗಾಲ ಮತ್ತು ಆಂಧ್ರ ಪ್ರದೇಶಕ್ಕೆ ಅಧಿಕಾರಿಗಳ ತಂಡವನ್ನು ಕಳುಹಿಸಿ ವರದಿ ಪಡೆದು ಕಾನೂನು ಇಲಾಖೆಗೆ ಸಲ್ಲಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

ವಿಧಾನ ಪರಿಷತ್ ಸದಸ್ಯ ಬಿ. ಎಂ. ಫಾರೂಖ್ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ತುಳುವಿಗೆ ರಾಜ್ಯದ ಎರಡನೇ ಭಾಷೆಯ ಸ್ಥಾನ ನೀಡುವುದು ನಮ್ಮ ಗಮನದಲ್ಲಿದೆ. ಆದರೆ ನಿಯಮಗಳ ಪಾಲನೆ ಆಗಬೇಕಿದೆ. ಡಾ। ಮೋಹನ್‌ ಆಳ್ವರ ಸಮಿತಿ ನೀಡಿದ ವರದಿ ನಮ್ಮ ಮುಂದಿದೆ. ಆದರೆ ಕಾನೂನು ಇಲಾಖೆಯು ಅನ್ಯ ರಾಜ್ಯಗಳ ಸ್ಥಿತಿಗತಿಯನ್ನು ತಿಳಿದುಕೊಳ್ಳಲು ಬಯಸಿರುವ ಹಿನ್ನೆಲೆಯಲ್ಲಿ ಬೇರೆ ರಾಜ್ಯಗಳಿಗೆ ಸಮಿತಿ ಕಳುಹಿಸಲು ಸರಕಾರ ಮುಂದಾಗಿದೆ ಎಂದು ಸಚಿವರು ತಿಳಿಸಿದರು.

ನಾವು ಈಗಾಗಲೇ ಈ ಮೂರು ರಾಜ್ಯಗಳಿಗೆ ಪತ್ರ ಬರೆದು ದ್ವಿಭಾಷೆ ಅಳವಡಿಕೆ ಬಗ್ಗೆ ಮಾಹಿತಿ ನೀಡುವಂತೆ ಕೇಳಿದ್ದೆವು. ಆದರೆ ಈ ರಾಜ್ಯಗಳಿಂದ ಸಮರ್ಪಕ ಪ್ರತಿಕ್ರಿಯೆ ಬಂದಿಲ್ಲ. ಆದ್ದರಿಂದ ನಾವೇ ಈಗ ತಂಡ ಕಳುಹಿಸಲು ಮುಂದಾಗಿದ್ದೇವೆ. ನಮ್ಮ ತಂಡ ನೀಡುವ ವರದಿಯನ್ನು ಕಾನೂನು ಇಲಾಖೆಗೆ ಸಲ್ಲಿಸುತ್ತೇವೆ ಎಂದು ಶಿವರಾಜ ತಂಗಡಿ ಭರವಸೆ ನೀಡಿದರು.

ಪ್ರತಾಪಸಿಂಹ ನಾಯಕ್ ಮಾತನಾಡಿ, 20-25 ವರ್ಷಗಳಿಂದ ತುಳುವಿಗೆ ಅಧಿಕೃತ ಸ್ಥಾನಮಾನ ನೀಡುವ ಪ್ರಯತ್ನ ನಡೆಯುತ್ತಿದೆ. ಆದರೆ ಇನ್ನೂ ಸಿಕ್ಕಿಲ್ಲ. ಇದಕ್ಕೆ ಕಾರಣವೇನು ಎಂದು ಸರಕಾರ ತಿಳಿಸಬೇಕು ಎಂದು ಆಗ್ರಹಿಸಿದರು.

ಹರೀಶ್‌ಕುಮಾ‌ರ್ ಮಾತನಾಡಿ, ತುಳುವನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಪ್ರಯತ್ನ ನಡೆಯಬೇಕು ಎಂದು ಆಗ್ರಹಿಸಿದರು. ಭಾರತಿ ಶೆಟ್ಟಿ ಹಾಗೂ ತೇಜಸ್ವಿನಿ ಅವರು ದನಿಗೂಡಿಸಿದರು.

Related posts

ಉಂಗಿಲಬೈಲು ಪಾಂಡುರಂಗ ನಿಧನ

Suddi Udaya

ಬೆಳ್ತಂಗಡಿಯ ಹಿರಿಯ ಹೊಟೇಲ್ ಉದ್ಯಮಿ ಅಬೂಬಕ್ಕರ್ ಹೃದಯಾಘಾತದಿಂದ ನಿಧನ

Suddi Udaya

ಕುವೆಟ್ಟು ಸ.ಉ.ಪ್ರಾ.ಶಾಲೆಯ ಎಲ್ ಕೆ ಜಿ -ಯು ಕೆ ಜಿ ವಿಭಾಗದ ಹೊರಾಂಗಣ ಆಟದ ಸಲಕರಣೆಗಳ ಉದ್ಘಾಟನೆ

Suddi Udaya

ಸಕಾಲದಲ್ಲಿ ತಾಲೂಕಿನ ಶಿಕ್ಷಕರ ವೇತನ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಿ -ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷ ಯೋಗೇಶ ಹೆಚ್ ಆರ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ, ದೇವರ ದರ್ಶನ

Suddi Udaya

ಅನ್ವೇಷಣಾ ಸ್ಪರ್ಧೆ: ಎಸ್‌ಡಿಎಂ ಸಂಸ್ಥೆಯ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಪ್ರಶಸ್ತಿ

Suddi Udaya
error: Content is protected !!