23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆ

ಉಜಿರೆ: ಸಮಾಜದ ಪ್ರತಿಯೊಬ್ಬ ಸದಸ್ಯರು ಘಟಕದ ಪ್ರತಿಯೊಂದು ಕಾರ್ಯಕ್ರಮದಲ್ಲಿ ಭಾಗವಹಿಸಿದರೆ ಯಶಸ್ಸು ಸುಲಭ ಸಾಧ್ಯ ಎಂದು ದೇವಾಂಗ ಸಮಾಜ ಉಜಿರೆ ವಲಯದ ಮಾಜಿ ಅಧ್ಯಕ್ಷ ಎಂ.ಡಿ.ಭಾಸ್ಕರ್ ಹೇಳಿದರು.

ಇವರು ಮೂಲಾರು ವಾಸುದೇವ ದೇವಾಂಗ ರವರ ಮನೆಯಲ್ಲಿ ನಡೆದ ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ವಲಯದ ಸಂಘಟನಾ ಕಾರ್ಯದರ್ಶಿ ರೋಹಿತ್ ಕಾಶಿಬೆಟ್ಟು ರವರು ಘಟಕದ ಸಮುದಾಯ ಚಟುವಟಿಕೆಗಳನ್ನು ವಿಸ್ತರಿಸಲು ಆರ್ಥಿಕ ಕ್ರೋಢೀಕರಣ ಮಾಡಬೇಕೆಂದು ಸಲಹೆ ನೀಡಿದರು.

ಸಭೆಯಲ್ಲಿ ವಲಯಾಧ್ಯಕ್ಷ ಮತ್ತು ಮುಂಡಾಜೆ ಗ್ರಾಮ ಪಂಚಾಯತ್ ಸದಸ್ಯ ರವಿ ನೆಯ್ಯಾಲುರವರು ಮುಂಡಾಜೆ ಘಟಕದ ಕಾರ್ಯನಿರ್ವಹಣೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಸಭೆಯ ಅಧ್ಯಕ್ಷತೆಯನ್ನು ದೇವಾಂಗ ಸಮಾಜ ಮುಂಡಾಜೆ ಘಟಕದ ಅಧ್ಯಕ್ಷ ರಾಜಗೋಪಾಲ ವಹಿಸಿದ್ದರು.

ಕು.ಸೌಭಾಗ್ಯ ಪ್ರಾರ್ಥಿಸಿದರು.ಶ್ರೀಮತಿ ಸೌಮ್ಯ ಗಣೇಶ್ ಸ್ವಾಗತಿಸಿದರು.ಸವಿತಾ ಕೇಶವ ದೇವಾಂಗ ವಂದಿಸಿದರು ಘಟಕದ ಕಾರ್ಯದರ್ಶಿ ಮಹೇಂದ್ರ ದೇವಾಂಗ ಕೊಡಂಗೆ ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್.ಐ.ಟಿ ತಂಡ ಬೆಳ್ತಂಗಡಿ ಕಚೇರಿಗೆ ಆಗಮನ: ಇಂದು ತಲೆಬುರುಡೆ ತೆಗೆದ ಸ್ಥಳ ಮಹಜರು ಸಾಧ್ಯತೆ

Suddi Udaya

ಮುಗೇರಡ್ಕ ನೆಕ್ಕರಾಜೆ ನಿವಾಸಿ ವಿಶ್ವನಾಥ್ ಗೌಡ ನಿಧನ

Suddi Udaya

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವ ಆರೋಪಿಗಳ ಮನೆಗೆ ಪೊಲೀಸ್ ಭೇಟಿ ಪರಿಶೀಲನೆ

Suddi Udaya

ಪಡುಬಿದ್ರೆಯಲ್ಲಿ ಭೀಕರ ರಸ್ತೆ ಅಪಘಾತ: ಅರಸಿನಮಕ್ಕಿ ಪುರುಷೋತ್ತಮ್ ಅಭ್ಯಂಕರ್ ರವರ ಪತ್ನಿ ಶ್ರೀಮತಿ ಸುಮಂಗಳ ಮೃತ್ಯು

Suddi Udaya

ಜನಸ್ಪಂದನ ಸಭೆಯ ಫಲಶ್ರುತಿ 108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ

Suddi Udaya

ಎಸ್.ಐ.ಟಿ ಕಚೇರಿಗೆ ಸುಜಾತ ಭಟ್ ವಿಚಾರಣೆಗೆ ಹಾಜರು

Suddi Udaya
error: Content is protected !!