July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ವಿಕಲಚೇತನರ ವಿಶೇಷ ಗ್ರಾಮ ಸಭೆ

ನಿಡ್ಲೆ ಗ್ರಾಮದ ವಿಕಲಚೇತನರ ವಿಶೇಷ ಗ್ರಾಮ ಸಭೆ ನಿಡ್ಲೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಫೆ.27 ರಂದು ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಶ್ರೀಮತಿ ಶ್ಯಾಮಲ ಇವರ ಅಧ್ಯಕ್ಷತೆ ಯಲ್ಲಿ ನಡೆಸಲಾಯಿತು.


ಮುಖ್ಯ ಅತಿಥಿಗಳಾಗಿ ಪಂಚಾಯಿತಿನ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್.ಎಂ, ಗ್ರಾಮ ಪಂಚಾಯಿತಿನ ಸದಸ್ಯರಾದ ಶ್ರೀಮತಿ ಹೇಮಾವತಿ.ಕೆ, ಮೋಹನ್ ಪೂಜಾರಿ, ಜಗದೀಶ್ ಶೆಟ್ಟಿ ಉಪಸ್ಥಿತರಿದ್ದರು.


ಬೆಳ್ತಂಗಡಿ ತಾಲೂಕಿನ ಪುನರ್ ವಸತಿ ಸಂಯೋಜಕರಾದ ಜೋನ್ ಬ್ಯಾಪ್ಟಿಸ್ಟ್ ಡಿಸೋಜಾ ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು. ನಿಡ್ಲೆ ಸಮುದಾಯ ಆರೋಗ್ಯ ಕೇಂದ್ರ ಸಮುದಾಯ ಅಧಿಕಾರಿ ಶ್ರೀಮತಿ ವಿನುತಾ ರವರು ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಿದರು.


ಗ್ರಾಮ ಸಭೆಯಲ್ಲಿ ಗ್ರಾಮೀಣ ವಿಕಲಚೇತನರ ಪುನರ್ವಸತಿ ಕಾರ್ಯಕರ್ತೆಯಾದ ಕುಮಾರಿ ಹೇಮಲತಾ ಇವರು ವಾರ್ಷಿಕ ವರದಿಯನ್ನು ಮಂಡಿಸಿದರು. ಗ್ರಾಮ ಸಭೆಯಲ್ಲಿ ಒಟ್ಟು ಆರು ಜನ ವಿಕಲಚೇತನ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ನೀರಿನ ಬಾಟಲಿಗಳನ್ನು ವಿತರಿಸಲಾಯಿತು.


ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿಕಲಚೇತನ ಫಲಾನುಭವಿಗಳು, ಆಶಾ ಕಾರ್ಯಕರ್ತೆಯರು, ಪಂಚಾಯಿತಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು ಪಂಚಾಯತ್ ಪಂಚಾಯತ್ ಅಭಿವೃದ್ದಿ ಅಧಿಕಾರಿ ದೀಪಕ್ ರಾಜ್.ಎಂ ಸ್ವಾಗತಿಸಿದರು, ಕಾರ್ಯದರ್ಶಿಯಾದ ಕೆ.ಪಿ.ಕೇಶವ ಗೌಡ ನಿರೂಪಿಸಿದರು.

Related posts

ಯಕ್ಷಗಾನದ ಮೇರು ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2023-24ನೆಯ ಸಾಲಿನಲ್ಲಿ ದಾಖಲೆಯ ನೇರ ನೇಮಕಾತಿಯ ಮೂಲಕ ಉದ್ಯೋಗಾವಕಾಶ

Suddi Udaya

ಓಡಿಲ್ನಾಳ ಉ.ಹಿ.ಪ್ರಾ. ಶಾಲೆಗೆ ಪದವೀಧರ ಪ್ರಾಥಮಿಕ ಶಿಕ್ಷಕಿಯಾಗಿ ಅಕ್ಷತಾ ಯಶೋಧರ ಶೆಟ್ಟಿ ಆಯ್ಕೆ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸೂಪರ್ 30 – ಪ್ರವೇಶ ಪರೀಕ್ಷೆ

Suddi Udaya

ಡಿ.17 : ಬೆಳ್ತಂಗಡಿ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸುವರ್ಣ “ಕರ್ನಾಟಕ: ಭಾಷೆ ಸಾಹಿತ್ಯ ಸಂಸ್ಕೃತಿ” ಆಶಯದ ಹಿನ್ನೆಲೆಯಲ್ಲಿ ಸಮ್ಮೇಳನದ ರೂಪುರೇಷೆ: ಜ್ಞಾನಪೀಠ ಪುರಸ್ಕೃತರಾಗಿರುವ ಎಂಟು ಮಂದಿ ಸಾಹಿತ್ಯ ಲೋಕದ ದಿಗ್ಗಜರ ನೆನಪು

Suddi Udaya

ಮಡಂತ್ಯಾರು ಜೆಸಿ ಸಪ್ತಾಹ: ಡಾ‌. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!