September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ವಿಕಲಚೇತನರ ವಿಶೇಷ ಗ್ರಾಮ ಸಭೆ

ನಿಡ್ಲೆ ಗ್ರಾಮದ ವಿಕಲಚೇತನರ ವಿಶೇಷ ಗ್ರಾಮ ಸಭೆ ನಿಡ್ಲೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಫೆ.27 ರಂದು ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಶ್ರೀಮತಿ ಶ್ಯಾಮಲ ಇವರ ಅಧ್ಯಕ್ಷತೆ ಯಲ್ಲಿ ನಡೆಸಲಾಯಿತು.


ಮುಖ್ಯ ಅತಿಥಿಗಳಾಗಿ ಪಂಚಾಯಿತಿನ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್.ಎಂ, ಗ್ರಾಮ ಪಂಚಾಯಿತಿನ ಸದಸ್ಯರಾದ ಶ್ರೀಮತಿ ಹೇಮಾವತಿ.ಕೆ, ಮೋಹನ್ ಪೂಜಾರಿ, ಜಗದೀಶ್ ಶೆಟ್ಟಿ ಉಪಸ್ಥಿತರಿದ್ದರು.


ಬೆಳ್ತಂಗಡಿ ತಾಲೂಕಿನ ಪುನರ್ ವಸತಿ ಸಂಯೋಜಕರಾದ ಜೋನ್ ಬ್ಯಾಪ್ಟಿಸ್ಟ್ ಡಿಸೋಜಾ ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು. ನಿಡ್ಲೆ ಸಮುದಾಯ ಆರೋಗ್ಯ ಕೇಂದ್ರ ಸಮುದಾಯ ಅಧಿಕಾರಿ ಶ್ರೀಮತಿ ವಿನುತಾ ರವರು ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಿದರು.


ಗ್ರಾಮ ಸಭೆಯಲ್ಲಿ ಗ್ರಾಮೀಣ ವಿಕಲಚೇತನರ ಪುನರ್ವಸತಿ ಕಾರ್ಯಕರ್ತೆಯಾದ ಕುಮಾರಿ ಹೇಮಲತಾ ಇವರು ವಾರ್ಷಿಕ ವರದಿಯನ್ನು ಮಂಡಿಸಿದರು. ಗ್ರಾಮ ಸಭೆಯಲ್ಲಿ ಒಟ್ಟು ಆರು ಜನ ವಿಕಲಚೇತನ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ನೀರಿನ ಬಾಟಲಿಗಳನ್ನು ವಿತರಿಸಲಾಯಿತು.


ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿಕಲಚೇತನ ಫಲಾನುಭವಿಗಳು, ಆಶಾ ಕಾರ್ಯಕರ್ತೆಯರು, ಪಂಚಾಯಿತಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು ಪಂಚಾಯತ್ ಪಂಚಾಯತ್ ಅಭಿವೃದ್ದಿ ಅಧಿಕಾರಿ ದೀಪಕ್ ರಾಜ್.ಎಂ ಸ್ವಾಗತಿಸಿದರು, ಕಾರ್ಯದರ್ಶಿಯಾದ ಕೆ.ಪಿ.ಕೇಶವ ಗೌಡ ನಿರೂಪಿಸಿದರು.

Related posts

ನಾರಾವಿ: ವಿಶ್ವ ಪರಿಸರ ದಿನಾಚರಣೆಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಪ್ರಮಾಣ ವಚನ ಸ್ವೀಕಾರ: ಪ್ರಭು ಶ್ರೀರಾಮಚಂದ್ರನ ಹೆಸರಿನಲ್ಲಿ ಪ್ರಮಾಣ ವಚನ ಮಾಡಿ ಗಮನ ಸೆಳೆದ ಹರೀಶ್ ಪೂಂಜ

Suddi Udaya

ಉದ್ಯಮಿ ಸುರೇಶ್ ದೇವಾಡಿಗರವರು ತೋಟತ್ತಾಡಿ ಶ್ರೀ ಉಳ್ಳಾಲ್ತಿ ಭಜನಾ ಮಂದಿರದ ಭಜನಾ ತಂಡದವರಿಗೆ ನೀಡಿದ ಸಮವಸ್ತ್ರದ ಬಿಡುಗಡೆ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತೆ

Suddi Udaya

ಅರಸಿನಮಕ್ಕಿ: ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಕಾಳಿ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಗುರುವಾಯನಕೆರೆ ನಿವಾಸಿ ಜಿ. ಅಬ್ದುಲ್ ಹಮೀದ್ ನಿಧನ

Suddi Udaya
error: Content is protected !!