April 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆರಿಯ : ಗ್ರಾಮ ಪಂಚಾಯತಿನ ದ್ವಿತೀಯ ಹಂತದ ಗ್ರಾಮ ಸಭೆ

ನೆರಿಯ : ಇಲ್ಲಿಯ ಗ್ರಾಮ ಪಂಚಾಯತದ 2023-24ನೇ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಫೆ.29ರಂದು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಸಂತಿ ಯವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ ಸಭಾಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಪಶು ವೈದ್ಯಾಧಿಕಾರಿ ಯತೀಶ್ ರವರು ಭಾಗವಹಿಸಿ ಗ್ರಾಮ ಸಭೆಯನ್ನು ಮುನ್ನಡೆಸಿದರು.

ರುದ್ರಭೂಮಿಯ ವಿಚಾರವಾಗಿ ಪ್ರಾರಂಭವಾದ ಚರ್ಚೆಗಳು ತೀವ್ರ ಗೊಂದಲವನ್ನು ಸೃಷ್ಟಿ ಮಾಡಿದ್ದೂ, ಈ ವಿಚಾರದ ನಿರ್ಣಯವಾಗದೆ ಗ್ರಾಮ ಸಭೆ ನಡೆಸುವುದಕ್ಕೆ ಬಿಡುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದರು. ವಾದ ವಿವಾದಗಳ ನಡುವೆ ಕೆಲವೊಂದು ಗ್ರಾಮಸ್ಥರು ಸಭೆಯ ನಡುವೆ ತೆರಳಿದರು.

ಕಳೆದ ಗ್ರಾಮಸಭೆಯಲ್ಲಿ ರುದ್ರಭೂಮಿಗೆ ಬೇಡಿಕೆ ಇಟ್ಟಿದ್ದು ಈವರೆಗೆ ಅದು ಆಗದೆ ಇರುವುದು ಹಾಗೂ ಯೋಗ್ಯವಲ್ಲದ ಸ್ಥಳದಲ್ಲಿ ಗಡಿಗುರುತು ಮಾಡಿರುವುದನ್ನು ಗ್ರಾಮಸ್ಥರು ವಿರೋಧಿಸಿ ಚರ್ಚೆಗಳನ್ನು ನಡೆಸಿದರು.

ಗ್ರಾಮ ಪಂಚಾಯತ್ ಸದಸ್ಯರುಗಳ ನಡುವೆಯೇ ಸರಿಯಿಲ್ಲ, ಎಷ್ಟೋ ವರ್ಷದಿಂದ ನೀರೇ ಬಾರದ ಮನೆಗಳಿಗೆ ಬಿಲ್ಲು ಬಂದಿದೆ, ಬಡ, ಮಧ್ಯಮ ಜನರು ಎಲ್ಲಿಂದ ಕೊಡಬೇಕು, ನೀರಿನ ಸಮಸ್ಯೆ ಬಗೆಹರಿಸದೆ ಯಾವ ರೀತಿಯಲ್ಲಿ ಬಿಲ್ಲನ್ನು ಕೇಳುತ್ತೀರಿ ಎಂದು ಗ್ರಾಮಸ್ಥರು ಕೇಳಿದರು.

ಸರಕಾರಿ ಆಸ್ಪತ್ರೆಯಲ್ಲಿ 10 ಗಂಟೆಯಾದರು ಸಿಬ್ಬಂದಿಗಳು ಬರುವುದಿಲ್ಲ. ಆಸ್ಪತ್ರೆಯಲ್ಲಿ ವ್ಯವಸ್ಥೆಗಳು ಸರಿಯಿಲ್ಲ, ಆಂಬುಲೆನ್ಸ್ ನಲ್ಲೂ ಬೇಕಾದ ವ್ಯವಸ್ಥೆಗಳಿಲ್ಲ ಎಂದು ಆರೋಗ್ಯ ಇಲಾಖೆಗೆ ಆಗ್ರಹಿಸಿದರು.
ನೆರಿಯ ಗ್ರಾಮಕ್ಕೆ ಹೆಚ್ಚುವರಿ ಲೈನ್ ಮ್ಯಾನ್ ಬೇಕು, ಕಾಮಗಾರಿ ನಡೆಯುವ ಸ್ಥಳಕ್ಕೆ ಸದಸ್ಯರು ಬೇಟಿ ನೀಡಬೇಕು. ಮುಂದಿನ ಗ್ರಾಮ ಸಭೆಯಲ್ಲಿ ಪ್ರತಿಯೊಂದು ಅಧಿಕಾರಿಗಳು ಹಾಜರಿರಬೇಕು ಹಾಗೂ ಗ್ರಾಮಸ್ಥರ ಬೇಡಿಕೆಗಳು ಈಡೇರದಿದ್ದಲ್ಲಿ ಮುಂದಿನ ಗ್ರಾಮಸಭೆ ನಡೆಸುವುದಕ್ಕೆ ಬಿಡುವುದಿಲ್ಲ ಎಂದು ಗ್ರಾಮಸ್ಥರು ಆಗ್ರಹಿಸಿದರು.

ಉಪಾಧ್ಯಕ್ಷರಾದ ಶ್ರೀಮತಿ ಸಜಿತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಮ ಎ.ಎಸ್, ಸದಸ್ಯರುಗಳು, ವಿವಿಧ ಇಲಾಖೆ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಕಾರ್ಯದರ್ಶಿ ಅಜಿತ್ ಎಂ.ಬಿ ಸ್ವಾಗತಿಸಿ, ಮಧುಮಾಲ ರವರು ಅನುಪಾಲನ ವರದಿ ಮಂಡಿಸಿದರು.

Related posts

ಶಿಶಿಲ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ: ಲೋಕಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರರ ಆರಾಧನೆ

Suddi Udaya

ಅ.22 : ಉಜಿರೆ ಗ್ರಾ.ಪಂ.ನಲ್ಲಿ ಅಣಬೆ ಬೇಸಾಯದ ತರಬೇತಿ

Suddi Udaya

ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ: ಕಾಮಗಾರಿಯ ವಿರುದ್ಧ ಬೆಳ್ತಂಗಡಿಯಲ್ಲಿ ಹೆದ್ದಾರಿ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಪಾಧ್ಯಕ್ಷರಾಗಿ ಲೋಕೇಶ್ ಗೌಡ

Suddi Udaya

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರ ಡ್ರಾಗನ್ ಕೃಷಿ ತೋಟಕ್ಕೆ ವಿಜ್ಞಾನಿ ತಂಡ ಭೇಟಿ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ