March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ತಾಲೂಕಿನ ಹೋಬಳಿವಾರು ಸ್ವೀಪ್ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ: ಇಲ್ಲಿನ ಸಂಗಮ ಸಭಾ ಭವನ ಲಾಯಿಲದಲ್ಲಿ ಫೆ . ರಂದು ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿಯ ಸಹಯೋಗದಲ್ಲಿ ತಾಲೂಕಿನ ಹೋಬಳಿವಾರು ಸ್ವೀಪ್ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬೆಳ್ತಂಗಡಿ ತಾಲೂಕಿನ ತಹಶೀಲ್ದಾರ್ ಪೃಥ್ವಿ ಸಾನಿಕಂ ತಾಲೂಕಿನ ಚುನಾವಣಾ ವ್ಯವಸ್ಥೆಯಲ್ಲಿ ಆಗಿರುವ ಸುಧಾರಣೆಗಳು ಹಾಗೂ ಬಿ.ಎಲ್.ಒ ಗಳು ನಿರ್ವಹಿಸುವ ಕಾರ್ಯಗಳನ್ನು ಶ್ಲಾಘಿಸಿ , 2024 ರ ಲೋಕಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವಲ್ಲಿ ಸ್ವೀಪ್(SVEEP) ಸಮಿತಿಯ ಈ ತರಬೇತಿಯು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ದ.ಕ ಜಿಲ್ಲಾ ಸ್ವೀಪ್ ಸಮಿತಿಯ DLMT(District Level master trainer) ಯೋಗೇಶ ಹೆಚ್.ಆರ್ 2009 ರಿಂದ ಸ್ವೀಪ್ ಸಮಿತಿಯು ಕೈಗೊಂಡಿರುವ ಮತದಾರ ಜಾಗೃತಿ ಕಾರ್ಯಕ್ರಮವು ಮತದಾನ ಪ್ರಮಾಣ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ,ಈ ಬಾರಿ ಅರ್ಹರೆಲ್ಲರೂ ಮತದಾರರ ಪಟ್ಟಿಗೆ ನೋಂದಣಿಯಾಗುವಂತೆ ಮಾಡುವ ಹಾಗೂ ನೋಂದಾಯಿತರೆಲ್ಲರೂ ಮತದಾನದಲ್ಲಿ ಪಾಲ್ಗೊಳ್ಳುವಂತೆ ಮಾಡುವ ಉದ್ದೇಶವನ್ನು ಹೊಂದಿದೆ ಎಂದರು.

ಸ್ವೀಪ್-4 ರಲ್ಲಿ ,ಶೇಕಡ ಐದರಷ್ಟು ಮತದಾನದ ಪ್ರಮಾಣವನ್ನು ಹೆಚ್ಚಿಸುವ ಗುರಿ ಹಾಗೂ ಇದರಲ್ಲಿ ಬಿ.ಎಲ್.ಒ ಹಾಗೂ ಸೂಪರ್ವೈಸರ್ ಗಳು ವಹಿಸುವ ಪಾತ್ರ ಬಹಳ ಮುಖ್ಯ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕು SVEEP(Systematic Voter’s Education & Electoral Participation ) ಸಮಿತಿಯ ಅಧ್ಯಕ್ಷರು, ತಾ.ಪಂ ನ ಕಾರ್ಯನಿರ್ವಾಹಣಾಧಿಕಾರಿಗಳಾದ ಭವಾನಿ ಶಂಕರ್ ರವರ ಅನುಪಸ್ಥಿತಿಯನ್ನು ಸ್ಮರಿಸಿ
ಸ್ವೀಪ್ ತರಬೇತಿ ನಡೆಸಲು ಅವರು ಮಾಡಿಕೊಟ್ಟಿರುವ ವ್ಯವಸ್ಥೆಗಳನ್ನು ಶ್ಲಾಘಿಸಿದರು.

ವೇದಿಕೆಯಲ್ಲಿ ತಾ.ಪಂ. ನ ವ್ಯವಸ್ಥಾಪಕರಾದ ಪ್ರಶಾಂತ್ ರವರು ಉಪಸ್ಥಿತರಿದ್ದರು. ಉದ್ಘಾಟನಾ ಕಾರ್ಯಕ್ರಮವನ್ನು ತಾ.ಸಂಪನ್ಮೂಲ ವ್ಯಕ್ತಿ(TLMT) ಶುಭ ಕೆ ನಿರೂಪಿಸಿ, TLMT ದಿವ್ಯಾ ಕುಮಾರಿ ಸ್ವಾಗತಿಸಿ, TLMT ರವಿಕುಮಾರ್ ಬಿ.ಆರ್. ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿ ವಂದಿಸಿದರು.

ಈ ಸಂದರ್ಭದಲ್ಲಿ PDO ಅಶೋಕ್ ತಾ.ಪಂ. ನ ವಿಷಯ ನಿರ್ವಾಹಕರಾದ ಸುಶೀಲಾ ಹಾಗೂ ಇತರೆ ಸಿಬ್ಬಂದಿಗಳು ಸಹಕರಿಸಿದರು.

Related posts

ಶ್ರೀ ಕ್ಷೇತ್ರ ಧ.ಗ್ರಾ. ಯೋ. ಗ್ರಾಮೀಣ ಶ್ರೇಷ್ಟ್ರತ ತರಬೇತಿ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಡಿ.13: ಕಕ್ಕಿಂಜೆಯಲ್ಲಿ ಮರ್ಹೂಂ ಅಝ್ಲೀನ್ ಸಿದ್ದೀಕ್ ಸ್ಮರಣಾರ್ಥ ರಕ್ತದಾನ ಶಿಬಿರ

Suddi Udaya

ಕೊಕ್ಕಡ: ಎಂಡೋ ಪೀಡಿತ ವಿಶೇಷ ಚೇತನರಿಗೆ ಉಚಿತ ಬಸ್ ಪಾಸ್ ವಿತರಣೆ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಕೆ.ವಸಂತ ಬಂಗೇರ ರವರ ನುಡಿನಮನ ಕಾರ್ಯಕ್ರಮಕ್ಕೆ ಆಹ್ವಾನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವತಿಯಿಂದ ಹರೀಶ್ ಮೂಲ್ಯ ರವರಿಗೆ ಆರ್ಥಿಕ ಧನಸಹಾಯ

Suddi Udaya
error: Content is protected !!