July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು: ಹಂದೇವ್ ನಲ್ಲಿ ಸಂಜೀವ ದೇವಾಡಿಗರವರಿಗೆ ನಿರ್ಮಿಸಿ ಕೊಡಲಾದ ವಾತ್ಸಲ್ಯ ಮನೆಯನ್ನು ಎಸ್ ಡಿ‌ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಶ್ರದ್ಧಾ ಅಮಿತ್ ರವರಿಂದ ಹಸ್ತಾಂತರ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ)ಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ಸಮಾಜದ ಕಟ್ಟಕಡೆಯ ನಿರ್ಗತಿಕ ಅಸಹಾಯಕ ಕುಟುಂಬಗಳಿಗೆ ಪರಮ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷರಾದ ಶ್ರೀಮತಿ ಹೇಮಾವತಿ ವಿ ಹೆಗ್ಗಡೆಯವರು ವಾತ್ಸಲ್ಯ ಮನೆ ನಿರ್ಮಾಣ ಮಾಡುವುದರೊಂದಿಗೆ ಮೂಲಭೂತ ಸೌಕರ್ಯಗಳನ್ನು ದೊರಕಿಸಿಕೊಡಲಾಗುತ್ತಿದೆ.

ಇಂದು(ಫೆ.29) ವೇಣೂರು ಗ್ರಾಮದ ಹಂದೇವ್ ನಲ್ಲಿ ಸಂಜೀವ ದೇವಾಡಿಗ ರವರಿಗೆ ನಿರ್ಮಿಸಿ ಕೊಡಲಾದ ವಾತ್ಸಲ್ಯ ಮನೆಯನ್ನು ಎಸ್ ಡಿ‌ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಶ್ರೀಮತಿ ಶ್ರದ್ಧಾ ಅಮಿತ್ ರವರು ಹಸ್ತಾಂತರಿಸಿದರು.

ಮನುಷ್ಯ ಬದುಕಿನ ಉದ್ದಕ್ಕೂ ನೆಮ್ಮದಿಯಾಗಿ ಬದುಕಬೇಕು ಎಂದು ದುಡಿಮೆಯನ್ನು ಮಾಡುತ್ತಾನೆ. ವಾಸಕ್ಕೆ ಮನೆಯನ್ನು ನಿರ್ಮಿಸಬೇಕು ಎಂಬುದು ಎಲ್ಲರ ಆಶಯವಾಗಿರುತ್ತದೆ. ಆದರೆ ಕೆಲವೊಂದು ಕುಟುಂಬಗಳಿಗೆ ನಾನಾ ಕಾರಣಗಳಿಂದಾಗಿ ತನ್ನ ಆಶಯದ ಗುರಿಗಳನ್ನು ಸಾಧಿಸಲು ಅಸಹಾಯಕರಾಗಿ ತಮ್ಮ ಬದುಕು ಶೋಷನಿಯ ಸ್ಥಿತಿಯಲ್ಲಿರುತ್ತದೆ‌. ಅಂತವರನ್ನು ಗುರುತಿಸಿ ತನ್ನ ಜೀವನದ ಕೊನೆಯ ಗಟ್ಟದಲ್ಲಿರುವ ಕುಟುಂಬಗಳಿಗೆ ತೀರಾ ಅವಶ್ಯಕತೆಯುಳ್ಳ ಮೂಲಭೂತ ವ್ಯವಸ್ಥೆಗಳನ್ನು ಯೋಜನೆಯ ವತಿಯಿಂದ 17873 ಕುಟುಂಬಗಳಿಗೆ ಮನೆ ನೀರು ಬೆಳಕು ಔಷಧಿ ಆಹಾರ ಶೌಚಾಲಯ ಗಳನ್ನು ನಿರ್ಮಿಸಿಕೊಡುವುದರೊಂದಿಗೆ ಷೋಷಕರನ್ನು ನಿಯೋಜನೆ ಮಾಡಿ ರಾಜ್ಯಮಟ್ಟದಲ್ಲಿ ವ್ಯವಸ್ಥೆ ಕಲ್ಪಿಸಿರುವ ಕಾರ್ಯ ಅತ್ಯಂತ ಶ್ಲಾಘನೀಯವಾಗಿದೆ ಎಂದು ಪ್ರಶಂಸಿದರು.

ಅದರಲ್ಲಿ ಒಂದಾದ ಈ ಮನೆಯನ್ನು ಅತ್ಯುತ್ತಮ ವಾಗಿ ನಿರ್ಮಾಣ ಮಾಡಿ ನೀಡಿರುವ ಎಲ್ಲರಿಗೂ ಅಭಿನಂದನೆಗಳನ್ನು ತಿಳಿಸಿದರು.

ಯೋಜನೆಯ ಮುಖ್ಯ ನಿರ್ವಹಣಾಧಿಕಾರಿಗಳಾದ ಅನಿಲ್ ಕುಮಾರ್ ಎಸ್ ಎಸ್. , ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್, ತಾಲೂಕು ಜನ ಜಾಗೃತಿ ವೇದಿಕೆಯ ಕೋಶಾಧಿಕಾರಿ ಗಿರೀಶ್ ಮಹಿಳಾ ಜ್ಞಾನ ವಿಕಾಸದ ನಿರ್ದೇಶಕರಾದ ವಿಠಲ ಪೂಜಾರಿ, ಯೋಜನಾಧಿಕಾರಿಗಳಾದ ಶ್ರೀಮತಿ ಸಂಗೀತ ಶ್ರೀಮತಿ ಅಮೃತಾ, ತಾಲೂಕಿನ ಜನ ಜಾಗೃತಿ ವೇದಿಕೆಯ ಕೋಶಾಧಿಕಾರಿಗಳಾದ ಶ್ರೀ ಗಿರೀಶ್ , ಸಮನ್ವಯಾಧಿಕಾರಿ ಶ್ರೀಮತಿ ಹರಿಣಿ, ವಲಯ ಮೇಲ್ವಿಚಾರಕರಾದ ಶ್ರೀಮತಿ ಶಾಲಿನಿ, ಸೇವಾ ಪ್ರತಿನಿಧಿ ಜಯಂತಿ ಮೊದಲಾದವರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿಗಳಾದ ದಯಾನಂದರವರು ಸ್ವಾಗತಿಸಿ, ವಂದಿಸಿದರು.

Related posts

ಜ.4: ಗುರುವಾಯನಕೆರೆ ವಿದ್ವತ್ ಪಿ ಯು. ಕಾಲೇಜಿನಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಬ್ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಅತ್ಯಾಧುನಿಕ ಸಿಎಲ್‌ಐಎ ಮೆಶಿನ್ ಅಳವಡಿಕೆ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯ ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ

Suddi Udaya

ಕನ್ನಡ ಪ್ರಬಂಧ ಸ್ಪರ್ಧೆ: ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಗಗನ್ಯ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ವಕ್ಫ್ ಕಾಯ್ದೆಗೆ ಅಸಂವಿಧಾನಿಕ ತಿದ್ದುಪಡಿ: ಕಕ್ಕಿಂಜೆಯಲ್ಲಿ ಮೂರು ಪಂಚಾಯತ್ ವ್ಯಾಪ್ತಿಯ ಮಸ್ಜಿದ್ ಗಳ ಜಂಟಿ ಪ್ರತಿಭಟನೆ

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆ

Suddi Udaya
error: Content is protected !!