March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಶ್ರೀ ದೇವರಿಗೆ ಕಲಶಾಭಿಷೇಕ, ದರ್ಶನ ಬಲಿ, ಬಟ್ಟಲು ಕಾಣಿಕೆ

ಶಿಬಾಜೆ: ಇಲ್ಲಿಯ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಫೆ.29 ರಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವೈದಿಕ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಬೆಳಿಗ್ಗೆ ಕಲಶ ಪೂಜೆ , ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಮಧ್ಯಾಹ್ನ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ನಂತರ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ದಿವಾಕರ ಹೆಬ್ಬಾರ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಘವೇಂದ್ರ ನಾಯಕ್, ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಅರ್ಚಕರು ಮತ್ತು ಊರವರು ಉಪಸ್ಥಿತರಿದ್ದರು.

ರಾತ್ರಿ ಗಂಟೆ 8ಕ್ಕೆ ರಂಗಪೂಜೆ (ಗಣಪತಿ ಮತ್ತು ದೇವಿ ಸನ್ನಿಧಿಯಲ್ಲಿ) ನಡೆಯಲಿದೆ.

Related posts

ಮಡಂತ್ಯಾರು: ಪಾರೆಂಕಿ ನಿವಾಸಿ ಸಾಂತಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಬೆಳಾಲು: ಮೈತ್ರಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 19 ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಅಳದಂಗಡಿ: ಆಯಾನ್ಸ್ ಮೊಬೈಲ್ ಮಾಲಕ ಅರಿಹಂತ್ ಜೈನ್ ರವರ ಪತ್ನಿ ಪಲ್ಲವಿ ಜೈನ್ ನಿಧನ

Suddi Udaya

ಕುತ್ಲೂರು ಮನೆ ಕಳ್ಳತನ ಪ್ರಕರಣ: ಕುಖ್ಯಾತ ಕಳ್ಳ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ

Suddi Udaya

ಮಾಲಾಡಿಯ ಜೆನಿನ್ ಡಿಸೋಜರವರಿಗೆ ಬಿ.ಎ.ಎಸ್.ಎಲ್.ಪಿ ಯಲ್ಲಿ ಮೂರನೇ ರ್‍ಯಾಂಕ್

Suddi Udaya

ಲಾಯಿಲ: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya
error: Content is protected !!