38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾ ಗೇರುಕಟ್ಟೆಯಲ್ಲಿ ವಶ: ಸ್ಕೂಟರ್ ಸಹಿತ ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ: ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ಬೆಳ್ತಂಗಡಿ ಪೊಲೀಸರು ಗೇರುಕಟ್ಟೆಯಲ್ಲಿವಶಪಡಿಸಿಕೊಂಡಿದ್ದು ಇಬ್ಬರನ್ನು ಬಂಧಿಸಿದ ಪ್ರಕರಣ ವರದಿಯಾಗಿದೆ.

ಗೇರುಕಟ್ಟೆ ನಿವಾಸಿ ಉಮ್ಮರ್ ಫಾರೂಕ್ ಹಾಗೂ ಮುಂಡಾಜೆ ಸೋಮಂದಡ್ಕ ನಿವಾಸಿ ಸತೀಶ್ ಯಾನೆ ಸ್ಕಾರ್ಪಿಯೋ ಸತೀಶ್ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಗೇರುಕಟ್ಟೆ ಸಮೀಪ ಓಡುರೊಟ್ಟು ಎಂಬಲ್ಲಿ ಕೆ..ಎ 70ಜೆ.5511ನಂಬರಿನ ಸ್ಕೂಟಿಯೊಂದಿಗೆ ಅನುಮಾನಾಸ್ಪದವಾಗಿ ನಿಂತಿರುವುದನ್ನು ನೋಡಿದ ಬೆಳ್ತಂಗಡಿ ಪಿ.ಎಸ್.ಐ ಚಂದ್ರಶೇಖರ್ ಹಾಗೂ ತಂಡ ತಡೆದು ವಿಚರಣೆ ನಡೆಸಿ ತಪಾಸಣೆ ನಡೆಸಿದಾಗ ಆರೋಪಿಗಳ ಬಳಿಯಿಂದ 2.10ಕೆ.ಜಿ ಗಾಂಜಾ ಅಲ್ಲದೆ ಸತೀಶ್ ಕೈಯಲ್ಲಿ 55ಗ್ರಾಂ ಗಾಂಜಾ ಪತ್ತೆಯಾಗಿದೆ.

ವಶಪಡಿಸಿಕೊಂಡಿರುವ ಒಟ್ಟು ಗಾಂಜಾದ ಮೌಲ್ಯ 51,000 ಎಂದು ಅಂದಾಜಿಸಲಾಗಿದೆ. ಗಾಂಜಾವನ್ನು ವಶಪಡಿಸಿಕೊಂಡ ಪೊಲೀಸರು,‌‌ ಗಾಂಜಾ ಸಾಗಾಟಕ್ಕೆ ಕೃತ್ಯಕ್ಕೆ ಬಳಸಿದ ಸ್ಕೂಟರ್ ನ್ನು ಆರೋಪಿಗಳೊಂದಿಗೆ ವಶಕ್ಕೆ ಪಡೆದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 25/2024 ಕಲಂ: 8( c ) ,20(b) NDPS ACT ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪರಿಸರ ದಿನಾಚರಣೆ

Suddi Udaya

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂಎಲ್ಸಿ ಹರೀಶ್ ಕುಮಾರ್ ಪಿಕ್ಸ್

Suddi Udaya

ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.

Suddi Udaya

ಮಾನಭಂಗ ಯತ್ನ, ಕಿಡ್ನಾಪ್ ಪ್ರಕರಣ : ಪ್ರಭಾಕರ ಹೆಗ್ಡೆಗೆ ನಿರೀಕ್ಷಣಾ ಜಾಮೀನು

Suddi Udaya

ಕನ್ಯಾಡಿ -2 ಸ.ಉ. ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!