September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾ ಗೇರುಕಟ್ಟೆಯಲ್ಲಿ ವಶ: ಸ್ಕೂಟರ್ ಸಹಿತ ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ: ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ಬೆಳ್ತಂಗಡಿ ಪೊಲೀಸರು ಗೇರುಕಟ್ಟೆಯಲ್ಲಿವಶಪಡಿಸಿಕೊಂಡಿದ್ದು ಇಬ್ಬರನ್ನು ಬಂಧಿಸಿದ ಪ್ರಕರಣ ವರದಿಯಾಗಿದೆ.

ಗೇರುಕಟ್ಟೆ ನಿವಾಸಿ ಉಮ್ಮರ್ ಫಾರೂಕ್ ಹಾಗೂ ಮುಂಡಾಜೆ ಸೋಮಂದಡ್ಕ ನಿವಾಸಿ ಸತೀಶ್ ಯಾನೆ ಸ್ಕಾರ್ಪಿಯೋ ಸತೀಶ್ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಗೇರುಕಟ್ಟೆ ಸಮೀಪ ಓಡುರೊಟ್ಟು ಎಂಬಲ್ಲಿ ಕೆ..ಎ 70ಜೆ.5511ನಂಬರಿನ ಸ್ಕೂಟಿಯೊಂದಿಗೆ ಅನುಮಾನಾಸ್ಪದವಾಗಿ ನಿಂತಿರುವುದನ್ನು ನೋಡಿದ ಬೆಳ್ತಂಗಡಿ ಪಿ.ಎಸ್.ಐ ಚಂದ್ರಶೇಖರ್ ಹಾಗೂ ತಂಡ ತಡೆದು ವಿಚರಣೆ ನಡೆಸಿ ತಪಾಸಣೆ ನಡೆಸಿದಾಗ ಆರೋಪಿಗಳ ಬಳಿಯಿಂದ 2.10ಕೆ.ಜಿ ಗಾಂಜಾ ಅಲ್ಲದೆ ಸತೀಶ್ ಕೈಯಲ್ಲಿ 55ಗ್ರಾಂ ಗಾಂಜಾ ಪತ್ತೆಯಾಗಿದೆ.

ವಶಪಡಿಸಿಕೊಂಡಿರುವ ಒಟ್ಟು ಗಾಂಜಾದ ಮೌಲ್ಯ 51,000 ಎಂದು ಅಂದಾಜಿಸಲಾಗಿದೆ. ಗಾಂಜಾವನ್ನು ವಶಪಡಿಸಿಕೊಂಡ ಪೊಲೀಸರು,‌‌ ಗಾಂಜಾ ಸಾಗಾಟಕ್ಕೆ ಕೃತ್ಯಕ್ಕೆ ಬಳಸಿದ ಸ್ಕೂಟರ್ ನ್ನು ಆರೋಪಿಗಳೊಂದಿಗೆ ವಶಕ್ಕೆ ಪಡೆದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 25/2024 ಕಲಂ: 8( c ) ,20(b) NDPS ACT ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಮೈಲು ತುತ್ತು ವಿತರಣೆ ಹಾಗೂ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಉಜಿರೆಯ ಡಾ. ಟಿ. ಕೃಷ್ಣಮೂರ್ತಿ ರವರಿಗೆ ಹವ್ಯಕ ಶಿಕ್ಷಣ ರತ್ನ ಪ್ರಶಸ್ತಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ಕನ್ಯಾಡಿ 2 ಸ.ಉ. ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಪ್ರಯುಕ್ತ ಉಚಿತ ದಂತ ತಪಾಸಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ಯಶ್ ದಂಪತಿ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya

ಪ್ರಸಿದ್ದ ಗುಜರಾತ್ ಉದ್ಯಮಿ,ದಾನಿ,ಪಾಲಬೆ ಶೇಖರ್ ದೇವಾಡಿಗ ದಂಪತಿಯಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ನಂದಾದೀಪ ಸಮರ್ಪಣೆ

Suddi Udaya
error: Content is protected !!