July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ ಗ್ರಾ.ಪಂ. ಗ್ರಾಮ ಸಭೆ

ಆರಂಬೋಡಿ ಗ್ರಾಮ‌ಪಂಚಾಯತ್ ನ 2023-24 ನೇ ಸಾಲಿನ ದ್ವೀತಿಯ ಸುತ್ತಿನ ಗ್ರಾಮ‌ಸಭೆಯು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಜಯರವರ ಅಧ್ಯಕ್ಷತೆಯಲ್ಲಿ ಹೊಕ್ಕಾಡಿಗೋಳಿ ಶಾಲೆಯಲ್ಲಿ ಫೆ. 29 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಚಂದ್ರಶೇಖರ್ ಗ್ರಾಮಸಭೆಯನ್ನು ಮುನ್ನಡೆಸಿದರು.

ನಾರಾಯಣ ಗುರು ಸರ್ಕಲ್ ಮಾಡಿ ಗ್ರಾಮಸ್ಥರ ಬೇಡಿಕೆಯನ್ನು ಈಡೇರಿಸಿದ ಪಂಚಾಯತ್ ಗೆ ಗ್ರಾಮಸ್ಥ ಹರೀಶ್ ರವರು ಅಭಿನಂದನೆ ತಿಳಿಸಿದರು.

ಅಬ್ಬನಲ್ಕೆ ಮತ್ತು ತುಂಬೆಯಲ್ಲಿ ಟಿಸಿ ಅಳವಡಿಸುವ ಬಗ್ಗೆ ಗ್ರಾಮಸ್ಥರ ಬೇಡಿಕೆಯಿತ್ತು ಇಗಾಗಲೇ ಟಿಸಿ ಅಳವಡಿಸಲಾಗಿದೆ ಮೆಸ್ಕಾಂ ಇಲಾಖೆಯ ಕೆಲಸಕ್ಕೆ ಮೆಚ್ಚುಗೆಯಿದೆ ಎಂದು ಗ್ರಾಮಸ್ಥರು ತಿಳಿಸಿದರು.

ಗುಂಡೂರಿನಲ್ಲಿ ವಾರ್ಡ್ ಸಭೆಗೆ ನಾಲ್ಕೂ ಸದಸ್ಯರಲ್ಲಿ ಒಬ್ಬರೂ ಬರಲಿಲ್ಲ.ವಾರ್ಡ್ ಸಭೆಯ ಆಮಂತ್ರಣವನ್ನು ಸದಸ್ಯರಿಗೆ ನಿಡಿಲ್ವ ? ಸದಸ್ಯರೇ ಬರದಿದ್ದರೇ ಗ್ರಾಮಸಭೆಗೆ ಗ್ರಾಮಸ್ಥರು ಬರುತ್ತರಾ ಎಂದು ಗ್ರಾಮಸ್ಥರು ಪ್ರಶ್ನಿಸಿದರು.

ಗುಂಡೂರಿಯಲ್ಲಿ 7 ಬೋರ್ ವೆಲ್ ತೊಡಿಸಿದ್ದೀರಿ. ಇನ್ನೂ ಕಲೆಕ್ಷನ್ ಕೊಡಲಿಲ್ಲ ಯಾಕೆ. ಅವಶ್ಯಕತೆ ಇದ್ದರೆ ಮಾತ್ರ ಬೋರ್ ತೆಗೆಯಬೇಕು. ಇಲ್ಲಂದ್ರೆ ಯಾಕೆ ಎಂದು ಗ್ರಾಮಸ್ಥರು ತಿಳಿಸಿದರು.

5 ಸೆಂಟ್ಸ್ ಕಾಲೋನಿಯ ವಿದ್ಯುತ್ ಕೊರತೆಯನ್ನು ಆದಷ್ಟು ಬೇಗ ನೀಗಿಸಬೇಕು.ಪಾದೆಗುರಿಯಲ್ಲಿ ನೀರಿನ‌ ಪಂಪ್ ಅಳವಡಿಸಬೇಕು.‌ ನೀರಪಲ್ಕೆಯಲ್ಲಿ ಬಸ್ ಸ್ಟ್ಯಾಂಡ್ ಕಳಪೆ ಕಾಮಗಾರಿಯಾಗಿದೆ.ಅಲ್ಲಿಗೆ ಯಾರು ಬರುವಿದಿಲ್ಲ.ಅದರ ಬಗ್ಗೆ ಕ್ರಮ ಕೈಗೊಳ್ಳಬೇಕು.ಇಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಸರಬರಾಜುವಾಗುವುದಿಲ್ಲ,ಈ ಸಮಸ್ಯೆಗಳನ್ನು ಬೇಗ ಸರಿಪಡಿಸಿ ಎಂದು ಗ್ರಾಮಸ್ಥರು ಒತ್ತಾಯಿಸಿದರು.

ಆರಂಬೋಡಿ ಎರಡನೇ ಬ್ಲಾಕ್ ನಲ್ಲಿ ಒಂದು ವಿದ್ಯುತ್ ದೀಪ ಉರಿಯುವುದಿಲ್ಲ, ಆದಷ್ಟು ಬೇಗ ಸರಿಪಡಿಸಬೇಕೆಂದು ಗ್ರಾಮಸ್ಥರು ತಿಳಿಸಿದರು.ಶೀಘ್ರವಾಗಿ ಸರಿಪಡಿಸುವ ಭರವಸೆಯನ್ನು ಪಂಚಾಯತ್ ನೀಡಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಡಾ.ಸ್ಮೃತಿ ಯು ಅನುಪಾಲನಾ ವರದಿ ಸಭೆಯ ಮುಂದಿಟ್ಟರು. ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಬಗ್ಗೆ ತಿಳಿಯಪಡಿಸಿದರು.

ಪಂಚಾಯತ್ ಉಪಾಧ್ಯಕ್ಷ ಪ್ರವೀಣ್ ಚಂದ್ರ ಜೈನ್ ಹಾಗೂ ಸದಸ್ಯರು,ಅಂಗನವಾಡಿ ,ಆಶಾ ಕಾರ್ಯಕರ್ತರು, ಗ್ರಾಮಸ್ಥರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕಲ್ಮಂಜ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಬಂದಾರು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ 12 ವಿದ್ಯಾರ್ಥಿಗಳಿಗೆ 99 ಪರ್ಸೆಂಟೇಲ್

Suddi Udaya

ಏಪ್ರಿಲ್ 29: ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಗುರುವಾಯನಕೆರೆ ಶಾಖೆಯ ವ್ಯವಸ್ಥಾಪಕ ಪ್ರಶಾಂತ್ ಎಚ್ ಆಚಾರ್ಯರಿಗೆ ಬೀಳ್ಕೊಡುಗೆ

Suddi Udaya

ಪೆಟ್ರೋಲ್ ದರ ಏರಿಸುವ ಮೂಲಕ ರಾಜ್ಯಸರಕಾರದ ಬಣ್ಣ ಬಯಲಾಗಿದೆ : ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

Suddi Udaya
error: Content is protected !!