ಗೇರುಕಟ್ಟೆ ಶ್ರೀ ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ಗೇರುಕಟ್ಟೆ : ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿ, ಶೇಷಗಿರಿ ಕೊಜಪ್ಪಾಡಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವದ ಅಂಗವಾಗಿ ತಂಬಿಲ ಸೇವೆ, ನವಕ ಕಲಶಾಭಿಷೇಕ, ಪಂಚಾಮೃತ ಅಭಿಷೇಕ, ಆಶ್ಲೇಷಾ ಬಲಿ ಹಾಗೂ ಭಜನಾ ಕಾರ್ಯಕ್ರಮವು ಫೆ.29ರಂದು ನಡೆಯಿತು.

ಬೆಳಿಗ್ಗೆ ನಾಗತಂಬಿಲ ಸೇವೆ, ಸಂದೇಶ್ ಅನಿಲ ಮತ್ತು ಬಳಗ, ಮದ್ದಡ್ಕ ಹಾಗೂ ನಾಗಶ್ರೀ ಮಕ್ಕಳ ಭಜನಾ ಮಂಡಳಿ ಶೇಷಗಿರಿ, ಕೊಜಪ್ಪಾಡಿ ಇವರಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಆಶ್ಲೇಷಾ ಬಲಿ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ನಾಗಬ್ರಹ್ಮ ಸ್ವಾಮಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೆ.ಎನ್ ಆನಂದ ಶೆಟ್ಟಿ, ಕಾರ್ಯದರ್ಶಿ ಮಹೇಶ್. ಖಜಾಂಜಿ ಜಯರಾಂ ಶೆಟ್ಟಿ, ಸದಸ್ಯರು, ನಾಗಶ್ರೀ ಮಕ್ಕಳ ಭಜನಾ ಮಂಡಳಿಯ ಅಧ್ಯಕ್ಷರು, ಸದಸ್ಯರು, ನಾಗಶ್ರೀ ಮಹಿಳಾ ಮಂಡಳಿ ಅಧ್ಯಕ್ಷರು, ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

Leave a Comment

error: Content is protected !!