23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಶ್ರೀ ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

ಗೇರುಕಟ್ಟೆ : ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿ, ಶೇಷಗಿರಿ ಕೊಜಪ್ಪಾಡಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವದ ಅಂಗವಾಗಿ ತಂಬಿಲ ಸೇವೆ, ನವಕ ಕಲಶಾಭಿಷೇಕ, ಪಂಚಾಮೃತ ಅಭಿಷೇಕ, ಆಶ್ಲೇಷಾ ಬಲಿ ಹಾಗೂ ಭಜನಾ ಕಾರ್ಯಕ್ರಮವು ಫೆ.29ರಂದು ನಡೆಯಿತು.

ಬೆಳಿಗ್ಗೆ ನಾಗತಂಬಿಲ ಸೇವೆ, ಸಂದೇಶ್ ಅನಿಲ ಮತ್ತು ಬಳಗ, ಮದ್ದಡ್ಕ ಹಾಗೂ ನಾಗಶ್ರೀ ಮಕ್ಕಳ ಭಜನಾ ಮಂಡಳಿ ಶೇಷಗಿರಿ, ಕೊಜಪ್ಪಾಡಿ ಇವರಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಆಶ್ಲೇಷಾ ಬಲಿ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ನಾಗಬ್ರಹ್ಮ ಸ್ವಾಮಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೆ.ಎನ್ ಆನಂದ ಶೆಟ್ಟಿ, ಕಾರ್ಯದರ್ಶಿ ಮಹೇಶ್. ಖಜಾಂಜಿ ಜಯರಾಂ ಶೆಟ್ಟಿ, ಸದಸ್ಯರು, ನಾಗಶ್ರೀ ಮಕ್ಕಳ ಭಜನಾ ಮಂಡಳಿಯ ಅಧ್ಯಕ್ಷರು, ಸದಸ್ಯರು, ನಾಗಶ್ರೀ ಮಹಿಳಾ ಮಂಡಳಿ ಅಧ್ಯಕ್ಷರು, ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

Related posts

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಕುಟುಂಬ ಸಮೇತ ಭೇಟಿ: ವಿಶೇಷ ಪೂಜೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ, ದೇವರ ದರ್ಶನ

Suddi Udaya

ನಾಳ: ಚಂದ್ರ ಮಂಡಲ ರಥಕ್ಕೆ ಕಲಶಾಭಿಷೇಕ ದೈವಗಳಿಗೆ ಪಲ್ಲಕಿ ಸಮರ್ಪಣೆ

Suddi Udaya

ಕಲಾಕುಂಚ ಆರ್ಟ್ಸ್ ನಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಚಾರ್ಮಾಡಿಯಲ್ಲಿ ಟೊಮ್ಯಾಟೊ ಟೆಂಪೋ ಪಲ್ಟಿ

Suddi Udaya

ಕೊಕ್ಕಡ: ಜೇಸಿ ಆಡಳಿತ ಸಭೆ: ಚುನಾವಣೆ ಅರಿವು ಆಂದೋಲನ ಕಾರ್ಯಕ್ರಮ

Suddi Udaya
error: Content is protected !!