September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಶ್ರೀ ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

ಗೇರುಕಟ್ಟೆ : ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿ, ಶೇಷಗಿರಿ ಕೊಜಪ್ಪಾಡಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವದ ಅಂಗವಾಗಿ ತಂಬಿಲ ಸೇವೆ, ನವಕ ಕಲಶಾಭಿಷೇಕ, ಪಂಚಾಮೃತ ಅಭಿಷೇಕ, ಆಶ್ಲೇಷಾ ಬಲಿ ಹಾಗೂ ಭಜನಾ ಕಾರ್ಯಕ್ರಮವು ಫೆ.29ರಂದು ನಡೆಯಿತು.

ಬೆಳಿಗ್ಗೆ ನಾಗತಂಬಿಲ ಸೇವೆ, ಸಂದೇಶ್ ಅನಿಲ ಮತ್ತು ಬಳಗ, ಮದ್ದಡ್ಕ ಹಾಗೂ ನಾಗಶ್ರೀ ಮಕ್ಕಳ ಭಜನಾ ಮಂಡಳಿ ಶೇಷಗಿರಿ, ಕೊಜಪ್ಪಾಡಿ ಇವರಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಆಶ್ಲೇಷಾ ಬಲಿ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ನಾಗಬ್ರಹ್ಮ ಸ್ವಾಮಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೆ.ಎನ್ ಆನಂದ ಶೆಟ್ಟಿ, ಕಾರ್ಯದರ್ಶಿ ಮಹೇಶ್. ಖಜಾಂಜಿ ಜಯರಾಂ ಶೆಟ್ಟಿ, ಸದಸ್ಯರು, ನಾಗಶ್ರೀ ಮಕ್ಕಳ ಭಜನಾ ಮಂಡಳಿಯ ಅಧ್ಯಕ್ಷರು, ಸದಸ್ಯರು, ನಾಗಶ್ರೀ ಮಹಿಳಾ ಮಂಡಳಿ ಅಧ್ಯಕ್ಷರು, ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

Related posts

ಮೂಡುಕೋಡಿಯಲ್ಲಿ ಚಿರತೆ ಸೆರೆಹಿಡಿಯಲು ಬೋನ್ ಅಳವಡಿಕೆ

Suddi Udaya

ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಗೌರವ ಪ್ರಶಸ್ತಿ: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಕಾಲೇಜಿನ ಉಪಪ್ರಚಾರ್ಯೆ ಡಾ. ಸುಜಾತಾ ಕೆ.ಜೆ. ಅವರಿಗೆ ಗೌರವಾರ್ಪಣೆ

Suddi Udaya

ಆಪರೇಷನ್ ಸಿಂದೂರ: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!