ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆ

Suddi Udaya

ಉಜಿರೆ: ಸಮಾಜದ ಪ್ರತಿಯೊಬ್ಬ ಸದಸ್ಯರು ಘಟಕದ ಪ್ರತಿಯೊಂದು ಕಾರ್ಯಕ್ರಮದಲ್ಲಿ ಭಾಗವಹಿಸಿದರೆ ಯಶಸ್ಸು ಸುಲಭ ಸಾಧ್ಯ ಎಂದು ದೇವಾಂಗ ಸಮಾಜ ಉಜಿರೆ ವಲಯದ ಮಾಜಿ ಅಧ್ಯಕ್ಷ ಎಂ.ಡಿ.ಭಾಸ್ಕರ್ ಹೇಳಿದರು.

ಇವರು ಮೂಲಾರು ವಾಸುದೇವ ದೇವಾಂಗ ರವರ ಮನೆಯಲ್ಲಿ ನಡೆದ ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ವಲಯದ ಸಂಘಟನಾ ಕಾರ್ಯದರ್ಶಿ ರೋಹಿತ್ ಕಾಶಿಬೆಟ್ಟು ರವರು ಘಟಕದ ಸಮುದಾಯ ಚಟುವಟಿಕೆಗಳನ್ನು ವಿಸ್ತರಿಸಲು ಆರ್ಥಿಕ ಕ್ರೋಢೀಕರಣ ಮಾಡಬೇಕೆಂದು ಸಲಹೆ ನೀಡಿದರು.

ಸಭೆಯಲ್ಲಿ ವಲಯಾಧ್ಯಕ್ಷ ಮತ್ತು ಮುಂಡಾಜೆ ಗ್ರಾಮ ಪಂಚಾಯತ್ ಸದಸ್ಯ ರವಿ ನೆಯ್ಯಾಲುರವರು ಮುಂಡಾಜೆ ಘಟಕದ ಕಾರ್ಯನಿರ್ವಹಣೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಸಭೆಯ ಅಧ್ಯಕ್ಷತೆಯನ್ನು ದೇವಾಂಗ ಸಮಾಜ ಮುಂಡಾಜೆ ಘಟಕದ ಅಧ್ಯಕ್ಷ ರಾಜಗೋಪಾಲ ವಹಿಸಿದ್ದರು.

ಕು.ಸೌಭಾಗ್ಯ ಪ್ರಾರ್ಥಿಸಿದರು.ಶ್ರೀಮತಿ ಸೌಮ್ಯ ಗಣೇಶ್ ಸ್ವಾಗತಿಸಿದರು.ಸವಿತಾ ಕೇಶವ ದೇವಾಂಗ ವಂದಿಸಿದರು ಘಟಕದ ಕಾರ್ಯದರ್ಶಿ ಮಹೇಂದ್ರ ದೇವಾಂಗ ಕೊಡಂಗೆ ಕಾರ್ಯಕ್ರಮ ನಿರೂಪಿಸಿದರು.

Leave a Comment

error: Content is protected !!