30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆ

ಉಜಿರೆ: ಸಮಾಜದ ಪ್ರತಿಯೊಬ್ಬ ಸದಸ್ಯರು ಘಟಕದ ಪ್ರತಿಯೊಂದು ಕಾರ್ಯಕ್ರಮದಲ್ಲಿ ಭಾಗವಹಿಸಿದರೆ ಯಶಸ್ಸು ಸುಲಭ ಸಾಧ್ಯ ಎಂದು ದೇವಾಂಗ ಸಮಾಜ ಉಜಿರೆ ವಲಯದ ಮಾಜಿ ಅಧ್ಯಕ್ಷ ಎಂ.ಡಿ.ಭಾಸ್ಕರ್ ಹೇಳಿದರು.

ಇವರು ಮೂಲಾರು ವಾಸುದೇವ ದೇವಾಂಗ ರವರ ಮನೆಯಲ್ಲಿ ನಡೆದ ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ವಲಯದ ಸಂಘಟನಾ ಕಾರ್ಯದರ್ಶಿ ರೋಹಿತ್ ಕಾಶಿಬೆಟ್ಟು ರವರು ಘಟಕದ ಸಮುದಾಯ ಚಟುವಟಿಕೆಗಳನ್ನು ವಿಸ್ತರಿಸಲು ಆರ್ಥಿಕ ಕ್ರೋಢೀಕರಣ ಮಾಡಬೇಕೆಂದು ಸಲಹೆ ನೀಡಿದರು.

ಸಭೆಯಲ್ಲಿ ವಲಯಾಧ್ಯಕ್ಷ ಮತ್ತು ಮುಂಡಾಜೆ ಗ್ರಾಮ ಪಂಚಾಯತ್ ಸದಸ್ಯ ರವಿ ನೆಯ್ಯಾಲುರವರು ಮುಂಡಾಜೆ ಘಟಕದ ಕಾರ್ಯನಿರ್ವಹಣೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಸಭೆಯ ಅಧ್ಯಕ್ಷತೆಯನ್ನು ದೇವಾಂಗ ಸಮಾಜ ಮುಂಡಾಜೆ ಘಟಕದ ಅಧ್ಯಕ್ಷ ರಾಜಗೋಪಾಲ ವಹಿಸಿದ್ದರು.

ಕು.ಸೌಭಾಗ್ಯ ಪ್ರಾರ್ಥಿಸಿದರು.ಶ್ರೀಮತಿ ಸೌಮ್ಯ ಗಣೇಶ್ ಸ್ವಾಗತಿಸಿದರು.ಸವಿತಾ ಕೇಶವ ದೇವಾಂಗ ವಂದಿಸಿದರು ಘಟಕದ ಕಾರ್ಯದರ್ಶಿ ಮಹೇಂದ್ರ ದೇವಾಂಗ ಕೊಡಂಗೆ ಕಾರ್ಯಕ್ರಮ ನಿರೂಪಿಸಿದರು.

Related posts

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಜಾರಿಗೆಬೈಲು ಬದ್ರಿಯಾ ಹಿದಾಯತುಲ್ ಇಸ್ಲಾಂ ಮದರಸ ಸಮಿತಿ ಹಾಗೂ ಗಲ್ಫ್ ಸಮಿತಿ ನೇತೃತ್ವದಲ್ಲಿ; ಜ. 7 : ಪರಿಮ ಜಾರಿಗೆ ಬೈಲಿನಲ್ಲಿ ಏಕದಿನ ಮತ ಪ್ರಭಾಷಣ – ಸನ್ಮಾನ ಕಾರ್ಯಕ್ರಮ

Suddi Udaya

ಸಂತೆಕಟ್ಟೆ ರಿಕ್ಷಾ ಚಾಲಕ ಮತ್ತು ಮಾಲಕರಿಂದ ನಿಧನರಾದ ಶೇಖರ್ ರವರಿಗೆ ಸಂತಾಪ

Suddi Udaya

ನಂದಿ ರಥ ಯಾತ್ರೆಗೆ ಗುರುವಾಯನಕೆರೆಯಲ್ಲಿ ಸ್ವಾಗತ

Suddi Udaya

ಉಜಿರೆಯ ರವೀಂದ್ರ ನಾಯಕ್ ನಿಧನ

Suddi Udaya

ಉಜಿರೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಉಷಾ ಕಾರಂತ್, ಉಪಾಧ್ಯಕ್ಷರಾಗಿ ರವಿ ಕುಮಾರ್ ಆಯ್ಕೆ

Suddi Udaya
error: Content is protected !!