July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆ

ಉಜಿರೆ: ಸಮಾಜದ ಪ್ರತಿಯೊಬ್ಬ ಸದಸ್ಯರು ಘಟಕದ ಪ್ರತಿಯೊಂದು ಕಾರ್ಯಕ್ರಮದಲ್ಲಿ ಭಾಗವಹಿಸಿದರೆ ಯಶಸ್ಸು ಸುಲಭ ಸಾಧ್ಯ ಎಂದು ದೇವಾಂಗ ಸಮಾಜ ಉಜಿರೆ ವಲಯದ ಮಾಜಿ ಅಧ್ಯಕ್ಷ ಎಂ.ಡಿ.ಭಾಸ್ಕರ್ ಹೇಳಿದರು.

ಇವರು ಮೂಲಾರು ವಾಸುದೇವ ದೇವಾಂಗ ರವರ ಮನೆಯಲ್ಲಿ ನಡೆದ ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ವಲಯದ ಸಂಘಟನಾ ಕಾರ್ಯದರ್ಶಿ ರೋಹಿತ್ ಕಾಶಿಬೆಟ್ಟು ರವರು ಘಟಕದ ಸಮುದಾಯ ಚಟುವಟಿಕೆಗಳನ್ನು ವಿಸ್ತರಿಸಲು ಆರ್ಥಿಕ ಕ್ರೋಢೀಕರಣ ಮಾಡಬೇಕೆಂದು ಸಲಹೆ ನೀಡಿದರು.

ಸಭೆಯಲ್ಲಿ ವಲಯಾಧ್ಯಕ್ಷ ಮತ್ತು ಮುಂಡಾಜೆ ಗ್ರಾಮ ಪಂಚಾಯತ್ ಸದಸ್ಯ ರವಿ ನೆಯ್ಯಾಲುರವರು ಮುಂಡಾಜೆ ಘಟಕದ ಕಾರ್ಯನಿರ್ವಹಣೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಸಭೆಯ ಅಧ್ಯಕ್ಷತೆಯನ್ನು ದೇವಾಂಗ ಸಮಾಜ ಮುಂಡಾಜೆ ಘಟಕದ ಅಧ್ಯಕ್ಷ ರಾಜಗೋಪಾಲ ವಹಿಸಿದ್ದರು.

ಕು.ಸೌಭಾಗ್ಯ ಪ್ರಾರ್ಥಿಸಿದರು.ಶ್ರೀಮತಿ ಸೌಮ್ಯ ಗಣೇಶ್ ಸ್ವಾಗತಿಸಿದರು.ಸವಿತಾ ಕೇಶವ ದೇವಾಂಗ ವಂದಿಸಿದರು ಘಟಕದ ಕಾರ್ಯದರ್ಶಿ ಮಹೇಂದ್ರ ದೇವಾಂಗ ಕೊಡಂಗೆ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ತಹಶೀಲ್ದಾರ ಯಾಗಿ ಸುರೇಶ್ ಕುಮಾರ್ ಟಿ ಎಸ್ ನೇಮಕ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮೋದಿಜೀ ರವರ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

Suddi Udaya

ಸವಣಾಲು ಫಲ್ಗುಣಿ ಕುಣಿತ ಭಜನಾ ತಂಡ ಹಾಗೂ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕೊಡೆ ವಿತರಣೆ

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ.ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಕನ್ಯಾಡಿ ಸೇವಾಧಾಮ ಸಂಸ್ಥಾಪಕ ಕೆ. ವಿನಾಯಕ ರಾವ್ ರವರಿಗೆ IOA ಸುವರ್ಣ ಸಾಧಕ ಪ್ರಶಸ್ತಿ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಡಾ. ಡಿ. ಹೆಗ್ಗಡೆಯವರಿಂದ ರೂ.25 ಲಕ್ಷ ಅನುದಾನ

Suddi Udaya
error: Content is protected !!