23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆ

ಉಜಿರೆ: ಸಮಾಜದ ಪ್ರತಿಯೊಬ್ಬ ಸದಸ್ಯರು ಘಟಕದ ಪ್ರತಿಯೊಂದು ಕಾರ್ಯಕ್ರಮದಲ್ಲಿ ಭಾಗವಹಿಸಿದರೆ ಯಶಸ್ಸು ಸುಲಭ ಸಾಧ್ಯ ಎಂದು ದೇವಾಂಗ ಸಮಾಜ ಉಜಿರೆ ವಲಯದ ಮಾಜಿ ಅಧ್ಯಕ್ಷ ಎಂ.ಡಿ.ಭಾಸ್ಕರ್ ಹೇಳಿದರು.

ಇವರು ಮೂಲಾರು ವಾಸುದೇವ ದೇವಾಂಗ ರವರ ಮನೆಯಲ್ಲಿ ನಡೆದ ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ವಲಯದ ಸಂಘಟನಾ ಕಾರ್ಯದರ್ಶಿ ರೋಹಿತ್ ಕಾಶಿಬೆಟ್ಟು ರವರು ಘಟಕದ ಸಮುದಾಯ ಚಟುವಟಿಕೆಗಳನ್ನು ವಿಸ್ತರಿಸಲು ಆರ್ಥಿಕ ಕ್ರೋಢೀಕರಣ ಮಾಡಬೇಕೆಂದು ಸಲಹೆ ನೀಡಿದರು.

ಸಭೆಯಲ್ಲಿ ವಲಯಾಧ್ಯಕ್ಷ ಮತ್ತು ಮುಂಡಾಜೆ ಗ್ರಾಮ ಪಂಚಾಯತ್ ಸದಸ್ಯ ರವಿ ನೆಯ್ಯಾಲುರವರು ಮುಂಡಾಜೆ ಘಟಕದ ಕಾರ್ಯನಿರ್ವಹಣೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಸಭೆಯ ಅಧ್ಯಕ್ಷತೆಯನ್ನು ದೇವಾಂಗ ಸಮಾಜ ಮುಂಡಾಜೆ ಘಟಕದ ಅಧ್ಯಕ್ಷ ರಾಜಗೋಪಾಲ ವಹಿಸಿದ್ದರು.

ಕು.ಸೌಭಾಗ್ಯ ಪ್ರಾರ್ಥಿಸಿದರು.ಶ್ರೀಮತಿ ಸೌಮ್ಯ ಗಣೇಶ್ ಸ್ವಾಗತಿಸಿದರು.ಸವಿತಾ ಕೇಶವ ದೇವಾಂಗ ವಂದಿಸಿದರು ಘಟಕದ ಕಾರ್ಯದರ್ಶಿ ಮಹೇಂದ್ರ ದೇವಾಂಗ ಕೊಡಂಗೆ ಕಾರ್ಯಕ್ರಮ ನಿರೂಪಿಸಿದರು.

Related posts

ಮೈರೋಳ್ತಡ್ಕ ಸ.ಉ. ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ವತಿಯಿಂದ ಶುದ್ಧ ನೀರಿನ ಘಟಕ ಕೊಡುಗೆ

Suddi Udaya

ಉಜಿರೆ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

Suddi Udaya

ಮಾಜಿ ಶಾಸಕ ವಸಂತ ಬಂಗೇರ ಅಗಲುವಿಕೆಗೆ ಕಾಜೂರು ಸಮಿತಿಯಿಂದ ಸಂತಾಪ

Suddi Udaya

ಗೇರುಕಟ್ಟೆ ಎಸ್.ಎಸ್.ಎಫ್. ಯೂನಿಟ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆ: OSAAT ಸಂಸ್ಥೆಯಿಂದ ರೂ.1.25 ಕೋಟಿ ಅನುದಾನದಲ್ಲಿ ಶಾಲಾ ಕೊಠಡಿಗೆ ಶಿಲಾನ್ಯಾಸ

Suddi Udaya

ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ : ಹಳೆಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ

Suddi Udaya
error: Content is protected !!