26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮ

ಪುದುವೆಟ್ಟು: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಾಗೂ ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮವನ್ನು ಫೆ.28 ರಂದು ಆಚರಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ವಹಿಸಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗೆಗಿನ ಆಸಕ್ತಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಾಗಬೇಕು, ವಿಜ್ಞಾನದಿಂದ ಯಾವುದನ್ನು ಬೇಕಾದರೂ ಸಾಧಿಸಬಹುದು ಎಂದು ಅಭಿಪ್ರಾಯಪಟ್ಟರು.


ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ನೆರಿಯ ವಲಯದ ಪಶುವೈದ್ಯಾಧಿಕಾರಿ ಹಾಗೂ ಉಜಿರೆ ಪಂಚಾಯತ್ ನ ಆಡಳಿತ ಅಧಿಕಾರಿ ಡಾ| ಯತೀಶ್ ಗೌಡ ಮಠ ಶಾಲೆಯಲ್ಲಿ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟನೆಗೊಳಿಸಿದರು.


ಉದ್ಘಾಟನೆಗೊಳಿಸಿ ಮಾತನಾಡಿದ ಡಾ| ಯತೀಶ್ ಗೌಡ ಮಠ ರವರು ಇತ್ತೀಚಿನ ದಿನಗಳಲ್ಲಿ ವಿಜ್ಞಾನ ಬಹಳಷ್ಟು ಮುಂದುವರೆದಿದೆ, ಹಿಂದಿನ ಕಾಲದಲ್ಲಿ ಎಷ್ಟು ಕಷ್ಟಕರ ಕೆಲಸಗಳನ್ನು ಇವಾಗಿನ ವಿಜ್ಞಾನ ಬಹಳಷ್ಟು ಸುಲಭವಾಗಿ ಮಾಡುವಂತೆ ಮುಂದುವರೆದಿದೆ, ಈ ಶಾಲೆಯ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗಳನ್ನು ಕಂಡು ತುಂಬಾನೇ ಸಂತೋಷವಾಯಿತು, ಇದರ ಮುಂದುವರಿದ ಭಾಗವಾಗಿ ನೀವು ತಯಾರಿಸಿದ ಮಾದರಿಗಳನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ತಿಳಿಸಿದರು.

ವೇದಿಕೆಯಲ್ಲಿ ಶಾಲೆಯ ಹಿರಿಯ ಶಿಕ್ಷಕರಾದ ಶ್ರೀಮತಿ ತೇಜಾವತಿಯವರು ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿಗಳಿಂದ ತಯಾರಿಸಲ್ಪಟ್ಟ ಸುಮಾರು 25ಕ್ಕೂ ಹೆಚ್ಚು ವಿವಿಧ ಬಗೆಯ ವಿಜ್ಞಾನ ಮಾದರಿಗಳನ್ನು ಪ್ರದರ್ಶನಕ್ಕೀಡಲಾಯಿತು.


ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರಾದ ಶ್ರೀನಿಶಾಂತ್ ಕುಮಾರ್ ರವರು ಸ್ವಾಗತಿಸಿ, ಶಾಲೆಯ ಹಿರಿಯ ಶಿಕ್ಷಕರಾದ ಶ್ರೀಮತಿ ತೇಜಾವತಿಯವರು ಧನ್ಯವಾದವಿತ್ತರು. ಕಾರ್ಯಕ್ರಮವನ್ನು ಶಾಲೆಯ ವಿಜ್ಞಾನ ಶಿಕ್ಷಕ ಪವನ್ ಕುಮಾರ್ ರವರು ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಬೆಳ್ತಂಗಡಿ ಟಿವಿಎಸ್ ಲೋಬೊ ಮೋಟರ್ಸ್ನಲ್ಲಿ ಎಲೆಕ್ಟ್ರಿಕಲ್ ದ್ವಿಚಕ್ರ ವಾಹನ ಬುಕ್ಕಿಂಗ್ ಹಾಗೂ ಸರ್ವಿಸ್ ಸೇವೆ ಲಭ್ಯ

Suddi Udaya

ಹೊಸಂಗಡಿ: ಗಣೇಶ್ ಪೂಜಾರಿ ಕಾರಾಜೆ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಶುಭಾರಂಭ

Suddi Udaya

ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಜಿಲ್ಲಾ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: ನೇರ್ತನೆ ಪ್ರದೇಶದಲ್ಲಿ ಕಾಡಾನೆ ದಾಳಿ

Suddi Udaya

ಹೊಸಂಗಡಿ ಧರಣೇಂದ್ರ ಕುಮಾರ್ ವಿರುದ್ದ ಊರ್ವ ಪೊಲೀಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಸುರೇಂದ್ರ ಪೈ ನಿಧನ

Suddi Udaya
error: Content is protected !!