22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ( ಡಿ .ಇಎ ಲ್. ಇಡಿ) ಸಂಸ್ಥೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ರಾಜೇಶ್ ಕೆ ಮಾತನಾಡುತ್ತಾ ನಮ್ಮ ದೇಶದ ಅಭಿವೃದ್ಧಿಗೆ ಅಡಿಪಾಯವಾಗಿರುವ ನಮ್ಮ ವಿಜ್ಞಾನಿಗಳ ಅದ್ಭುತ ಸಾಧನೆಗಳನ್ನು ಸ್ಮರಿಸುತ್ತಾ ಯುವಜನರಲ್ಲಿ ಸಂಶೋಧನೆ ಮತ್ತು ಆವಿಷ್ಕಾರಗಳನ್ನು ಕೈಗೊಳ್ಳಲು ಉತ್ತೇಜಿಸಬೇಕು ಮತ್ತು ವಿದ್ಯಾರ್ಥಿಗಳು ಕುತೂಹಲದಿಂದ ವಿಜ್ಞಾನದ ಪ್ರಯೋಗಗಳು ಹಾಗೂ ಮಾದರಿಗಳನ್ನು ತಯಾರಿಸುವ ಬಗ್ಗೆ ಪ್ರೇರಣೆ ನೀಡಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಬೇಕೆಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲ ಸ್ವಾಮಿ ಕೆ ಎ .ವಹಿಸಿ ಮಾತನಾಡುತ್ತಾ ರಾಮನ್ ಪರಿಣಾಮದ ಆವಿಷ್ಕಾರವನ್ನು ಸ್ಮರಿಸುವ ರಾಷ್ಟ್ರೀಯ ಆಚರಣೆಯು ನಮ್ಮ ರಾಷ್ಟ್ರದ ವೈಜ್ಞಾನಿಕ ಸಮುದಾಯವನ್ನು ಗೌರವಿಸುವಂತಿದೆ ಹಾಗೂ ವೈಜ್ಞಾನಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಸ್ಥಳೀಯ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕೆಂದು ಹೇಳಿದರು.

ಪ್ರಶಿಕ್ಷಣಾರ್ಥಿಗಳಾದ ಅಂಬಿಕಾ ಹಾಗೂ ಯತೀಕ್ಷಾ ರಾಷ್ಟ್ರೀಯ ವಿಜ್ಞಾನ ದಿನದ ಕುರಿತು ಮಾತನಾಡಿದರು.

ಉಪನ್ಯಾಸಕರಾದ ಮಂಜು ಆರ್, ಅನುಷಾ ಡಿ.ಜೆ. ಹಾಗೂ ಸಿಬ್ಬಂದಿ ವರ್ಗದವರು, ಪ್ರಶಿಕ್ಷಣಾರ್ಥಿಗಳು ಉಪಸ್ಥಿರಿದ್ದರು.

ಪ್ರಶಿಕ್ಷಣಾರ್ಥಿಗಳಾದ ಪ್ರತೀಕ್ಷಾ ಹಾಗೂ ದಿವ್ಯ ಪ್ರಾರ್ಥಿಸಿ, ಜಯಶ್ರೀ ಸ್ವಾಗತಿಸಿ, ಚಿತ್ರಲೇಖ ವಂದಿಸಿ, ಶಮೀಮ ಕಾರ್ಯಕ್ರಮ ನಿರೂಪಿಸಿದರು.

Related posts

ನ.15: ಉಜಿರೆಯ ಶ್ರೀ ಧ.ಮ. ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಹಳೇ ನಾಣ್ಯಗಳು ಹಾಗೂ ಪುರಾತನ ವಸ್ತುಗಳ ಪ್ರದರ್ಶನ

Suddi Udaya

ಬೆಳ್ತಂಗಡಿ: ನವೋದಯ ಸ್ವಸಹಾಯ ತಂಡದ ಪುರುಷ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ನೆರಿಯದಲ್ಲಿ ಅಟಲ್ ವಿರಾಸತ್ ಜನ್ಮ ಶತಾಬ್ದಿ ಪ್ರಯುಕ್ತ ಕಿರಣ್ ಚಂದ್ರ ಡಿ. ಪುಷ್ಪಗಿರಿಯವರಿಂದ ಕಿಟ್ ವಿತರಣೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ: ಡಿ.24 ರಿಂದ 28 ರವರೆಗೆ ವಿಜೃಂಭಣೆಯ ಬ್ರಹ್ಮಕಲಶೋತ್ಸವ ಸಂಭ್ರಮ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ ಕಾರ್ಯ

Suddi Udaya

ನಡ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!