24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇತಿಹಾಸ ಪ್ರಸಿದ್ದ ನಿಡಿಗಲ್ ಸಿರಿಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಯಶೋಧರ ಗೌಡ ಗುರಿಪಳ್ಳ ಆಯ್ಕೆ

ಕಲ್ಮಂಜ: ಸತ್ಯನಾಪುರದ ಸತ್ಯೊದ‌ ಸಿರಿಗಳ ಮೂಲ ಆಲಡೆ ಕ್ಷೇತ್ರ ಶ್ರೀ ಲೋಕನಾಥೇಶ್ವರ ದೇವಸ್ಥಾನ ಕನ್ಯಾಡಿ-ನಿಡಿಗಲ್ ಇದರ ಈ ವರ್ಷದ ಜಾತ್ರಾ ಮಹೋತ್ಸವವು ಮಾ.23 ರಿಂದ ಮಾ. 27 ರವರೆಗೆ ನಡೆಯಲಿದ್ದು ಈ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯು ಫೆ.28 ರಂದು ದೇವಸ್ಥಾನದ ವಠಾರದಲ್ಲಿ ದೇವಸ್ಥಾನದ ಆಡಳಿತಾಧಿಕಾರಿಯವರಾದ ಶ್ರೀನಿವಾಸ್ ಡಿಪಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ವರ್ಷದ ನಡ್ವಾಲ್‌ ಸಿರಿಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಮಾಜಿ ವ್ಯವಸ್ಥಾಪನಾ ಸಮಿತಿ‌ ಸದಸ್ಯರಾದ ಯಶೋಧರ ಗೌಡ ಕೊಡ್ಡೋಲುರವರು ಸರ್ವಾನುಮತದಿಂದ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಚೇತನ್ ಶೆಟ್ಟಿ ಗುರಿಪಳ್ಳ, ಕೋಶಾಧಿಕಾರಿಯಾಗಿ ಸಂತೋಷ್ ಗೌಡ ಗೋಳಿದೊಟ್ಟು ಇವರು ಆಯ್ಕೆಯಾದರು.

ಸಭೆಯಲ್ಲಿ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಜಯಂತ ಗೌಡ, ಸುಂದರ ಪೂಜಾರಿ, ಅರ್ಚಕರಾದ ಕೃಷ್ಣಮೂರ್ತಿ ಹೊಳ್ಳ, ನೀಲಯ್ಯ ಪೂಜಾರಿ, ದಿವಾಕರ ಏಣೀರು, ಪ್ರವೀಣ್ ವಿ.ಜಿ, ಪ್ರಸಾದ್ ಕುಮಾರ್, ನಾಣ್ಯಪ್ಪ ಪೂಜಾರಿ, ಭದ್ರಯ್ಯ ಪೂಜಾರಿ ಹಾಗೂ ಊರವರು ಉಪಸ್ಥಿತರಿದ್ದರು.

Related posts

ಬಂದಾರು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ಸಿಎ ಅಂತಿಮ ಪರೀಕ್ಷೆ: ಆರಂಬೋಡಿಯ ಸುರಕ್ಷಾ ಶೆಟ್ಟಿ ಉತ್ತೀರ್ಣ

Suddi Udaya

ಸ್ವ ಉದ್ಯೋಗಕ್ಕೆ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರಿಂದ ಸಹಕಾರ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ (ನಿ) ಸ್ಥಳಾಂತರಗೊಂಡ ಕಛೇರಿ ಉದ್ಘಾಟನೆ

Suddi Udaya
error: Content is protected !!