23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾ ಗೇರುಕಟ್ಟೆಯಲ್ಲಿ ವಶ: ಸ್ಕೂಟರ್ ಸಹಿತ ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ: ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ಬೆಳ್ತಂಗಡಿ ಪೊಲೀಸರು ಗೇರುಕಟ್ಟೆಯಲ್ಲಿವಶಪಡಿಸಿಕೊಂಡಿದ್ದು ಇಬ್ಬರನ್ನು ಬಂಧಿಸಿದ ಪ್ರಕರಣ ವರದಿಯಾಗಿದೆ.

ಗೇರುಕಟ್ಟೆ ನಿವಾಸಿ ಉಮ್ಮರ್ ಫಾರೂಕ್ ಹಾಗೂ ಮುಂಡಾಜೆ ಸೋಮಂದಡ್ಕ ನಿವಾಸಿ ಸತೀಶ್ ಯಾನೆ ಸ್ಕಾರ್ಪಿಯೋ ಸತೀಶ್ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಗೇರುಕಟ್ಟೆ ಸಮೀಪ ಓಡುರೊಟ್ಟು ಎಂಬಲ್ಲಿ ಕೆ..ಎ 70ಜೆ.5511ನಂಬರಿನ ಸ್ಕೂಟಿಯೊಂದಿಗೆ ಅನುಮಾನಾಸ್ಪದವಾಗಿ ನಿಂತಿರುವುದನ್ನು ನೋಡಿದ ಬೆಳ್ತಂಗಡಿ ಪಿ.ಎಸ್.ಐ ಚಂದ್ರಶೇಖರ್ ಹಾಗೂ ತಂಡ ತಡೆದು ವಿಚರಣೆ ನಡೆಸಿ ತಪಾಸಣೆ ನಡೆಸಿದಾಗ ಆರೋಪಿಗಳ ಬಳಿಯಿಂದ 2.10ಕೆ.ಜಿ ಗಾಂಜಾ ಅಲ್ಲದೆ ಸತೀಶ್ ಕೈಯಲ್ಲಿ 55ಗ್ರಾಂ ಗಾಂಜಾ ಪತ್ತೆಯಾಗಿದೆ.

ವಶಪಡಿಸಿಕೊಂಡಿರುವ ಒಟ್ಟು ಗಾಂಜಾದ ಮೌಲ್ಯ 51,000 ಎಂದು ಅಂದಾಜಿಸಲಾಗಿದೆ. ಗಾಂಜಾವನ್ನು ವಶಪಡಿಸಿಕೊಂಡ ಪೊಲೀಸರು,‌‌ ಗಾಂಜಾ ಸಾಗಾಟಕ್ಕೆ ಕೃತ್ಯಕ್ಕೆ ಬಳಸಿದ ಸ್ಕೂಟರ್ ನ್ನು ಆರೋಪಿಗಳೊಂದಿಗೆ ವಶಕ್ಕೆ ಪಡೆದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 25/2024 ಕಲಂ: 8( c ) ,20(b) NDPS ACT ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮದ್ದಡ್ಕ : ಮನೀಶ್ ಹೋಟೆಲ್ ಮಾಲಕ ರಮೇಶ್ ಪೂಜಾರಿ ನಿಧನ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಜಾಗೃತಿ ಕಾರ್ಯಕ್ರಮ

Suddi Udaya

ನೂತನ ಡಿವೈಎಸ್‌ಪಿ ಅವರನ್ನು ಭೇಟಿ ಮಾಡಿ ತಾಲೂಕಿಗೆ ಸ್ವಾಗತಿಸಿದ ಮುಸ್ಲಿಂ ಒಕ್ಕೂಟದ ಮುಖಂಡರು

Suddi Udaya

ಧರ್ಮಸ್ಥಳ ಡಿ ಹರ್ಷೇಂದ್ರ ಕುಮಾರ್ ರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಕನ್ಯಾಡಿ ಗಣೇಶೋತ್ಸವ ಸಮಿತಿ

Suddi Udaya

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಎಸ್.ಡಿ.ಎಂ ಪಾಲಿಟೆಕ್ನಿಕ್:‌ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣ ಕುರಿತು ಕಾರ್ಯಾಗಾರ

Suddi Udaya
error: Content is protected !!