September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾ ಗೇರುಕಟ್ಟೆಯಲ್ಲಿ ವಶ: ಸ್ಕೂಟರ್ ಸಹಿತ ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ: ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ಬೆಳ್ತಂಗಡಿ ಪೊಲೀಸರು ಗೇರುಕಟ್ಟೆಯಲ್ಲಿವಶಪಡಿಸಿಕೊಂಡಿದ್ದು ಇಬ್ಬರನ್ನು ಬಂಧಿಸಿದ ಪ್ರಕರಣ ವರದಿಯಾಗಿದೆ.

ಗೇರುಕಟ್ಟೆ ನಿವಾಸಿ ಉಮ್ಮರ್ ಫಾರೂಕ್ ಹಾಗೂ ಮುಂಡಾಜೆ ಸೋಮಂದಡ್ಕ ನಿವಾಸಿ ಸತೀಶ್ ಯಾನೆ ಸ್ಕಾರ್ಪಿಯೋ ಸತೀಶ್ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಗೇರುಕಟ್ಟೆ ಸಮೀಪ ಓಡುರೊಟ್ಟು ಎಂಬಲ್ಲಿ ಕೆ..ಎ 70ಜೆ.5511ನಂಬರಿನ ಸ್ಕೂಟಿಯೊಂದಿಗೆ ಅನುಮಾನಾಸ್ಪದವಾಗಿ ನಿಂತಿರುವುದನ್ನು ನೋಡಿದ ಬೆಳ್ತಂಗಡಿ ಪಿ.ಎಸ್.ಐ ಚಂದ್ರಶೇಖರ್ ಹಾಗೂ ತಂಡ ತಡೆದು ವಿಚರಣೆ ನಡೆಸಿ ತಪಾಸಣೆ ನಡೆಸಿದಾಗ ಆರೋಪಿಗಳ ಬಳಿಯಿಂದ 2.10ಕೆ.ಜಿ ಗಾಂಜಾ ಅಲ್ಲದೆ ಸತೀಶ್ ಕೈಯಲ್ಲಿ 55ಗ್ರಾಂ ಗಾಂಜಾ ಪತ್ತೆಯಾಗಿದೆ.

ವಶಪಡಿಸಿಕೊಂಡಿರುವ ಒಟ್ಟು ಗಾಂಜಾದ ಮೌಲ್ಯ 51,000 ಎಂದು ಅಂದಾಜಿಸಲಾಗಿದೆ. ಗಾಂಜಾವನ್ನು ವಶಪಡಿಸಿಕೊಂಡ ಪೊಲೀಸರು,‌‌ ಗಾಂಜಾ ಸಾಗಾಟಕ್ಕೆ ಕೃತ್ಯಕ್ಕೆ ಬಳಸಿದ ಸ್ಕೂಟರ್ ನ್ನು ಆರೋಪಿಗಳೊಂದಿಗೆ ವಶಕ್ಕೆ ಪಡೆದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 25/2024 ಕಲಂ: 8( c ) ,20(b) NDPS ACT ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಅಳದಂಗಡಿ: ಕೆದ್ದುವಿನಲ್ಲಿ ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ, ಹಲವರಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ನಾರಾಯಣ ಗುರುಗಳ 172ನೇ ಗುರುಜಯಂತಿ, ಸಾಧಕರಿಗೆ ಸನ್ಮಾನ, ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

Suddi Udaya

ಲಯನ್ ಎಂ. ಜಿ. ಶೆಟ್ಟಿಯವರಿಗೆ ಪ್ರತಿಷ್ಠಿತ ಎಮ್.ಜೆ.ಎಫ್ ಗೌರವ

Suddi Udaya

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಮಹಿಳಾ – ಯುವ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ಸಾಧಕರಿಗೆ ಸನ್ಮಾನ – ಸಾಂಸ್ಕೃತಿಕ ಝೇಂಕಾರ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!