25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾ ಗೇರುಕಟ್ಟೆಯಲ್ಲಿ ವಶ: ಸ್ಕೂಟರ್ ಸಹಿತ ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ: ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ಬೆಳ್ತಂಗಡಿ ಪೊಲೀಸರು ಗೇರುಕಟ್ಟೆಯಲ್ಲಿವಶಪಡಿಸಿಕೊಂಡಿದ್ದು ಇಬ್ಬರನ್ನು ಬಂಧಿಸಿದ ಪ್ರಕರಣ ವರದಿಯಾಗಿದೆ.

ಗೇರುಕಟ್ಟೆ ನಿವಾಸಿ ಉಮ್ಮರ್ ಫಾರೂಕ್ ಹಾಗೂ ಮುಂಡಾಜೆ ಸೋಮಂದಡ್ಕ ನಿವಾಸಿ ಸತೀಶ್ ಯಾನೆ ಸ್ಕಾರ್ಪಿಯೋ ಸತೀಶ್ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಗೇರುಕಟ್ಟೆ ಸಮೀಪ ಓಡುರೊಟ್ಟು ಎಂಬಲ್ಲಿ ಕೆ..ಎ 70ಜೆ.5511ನಂಬರಿನ ಸ್ಕೂಟಿಯೊಂದಿಗೆ ಅನುಮಾನಾಸ್ಪದವಾಗಿ ನಿಂತಿರುವುದನ್ನು ನೋಡಿದ ಬೆಳ್ತಂಗಡಿ ಪಿ.ಎಸ್.ಐ ಚಂದ್ರಶೇಖರ್ ಹಾಗೂ ತಂಡ ತಡೆದು ವಿಚರಣೆ ನಡೆಸಿ ತಪಾಸಣೆ ನಡೆಸಿದಾಗ ಆರೋಪಿಗಳ ಬಳಿಯಿಂದ 2.10ಕೆ.ಜಿ ಗಾಂಜಾ ಅಲ್ಲದೆ ಸತೀಶ್ ಕೈಯಲ್ಲಿ 55ಗ್ರಾಂ ಗಾಂಜಾ ಪತ್ತೆಯಾಗಿದೆ.

ವಶಪಡಿಸಿಕೊಂಡಿರುವ ಒಟ್ಟು ಗಾಂಜಾದ ಮೌಲ್ಯ 51,000 ಎಂದು ಅಂದಾಜಿಸಲಾಗಿದೆ. ಗಾಂಜಾವನ್ನು ವಶಪಡಿಸಿಕೊಂಡ ಪೊಲೀಸರು,‌‌ ಗಾಂಜಾ ಸಾಗಾಟಕ್ಕೆ ಕೃತ್ಯಕ್ಕೆ ಬಳಸಿದ ಸ್ಕೂಟರ್ ನ್ನು ಆರೋಪಿಗಳೊಂದಿಗೆ ವಶಕ್ಕೆ ಪಡೆದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 25/2024 ಕಲಂ: 8( c ) ,20(b) NDPS ACT ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವಿಶೇಷ ಸಭೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಶಿಕ್ಷಕರ ದಿನಾಚರಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ತಡೆ ಕೋರಿದ್ದ ಅರ್ಜಿ ವಿಚಾರಣೆ; ತೀರ್ಪು ಬರುವವರೆಗೆ ಬಲವಂತದ ಕ್ರಮ ಬೇಡ ಹೈಕೋರ್ಟ್ ಆದೇಶ

Suddi Udaya

ಕಡಮಗುಂಡಿ, ಬೊಳ್ಳೆ ಜಲಪಾತ, ಗಡಾಯಿಕಲ್ಲು ಪ್ರವಾಸಿ ತಾಣಗಳಿಗೆ ಹೇರಿದ್ದ ನಿರ್ಬಂಧ ನಾಳೆಯಿಂದ (ಜ.9) ತೆರೆ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

Suddi Udaya

ರಸ್ತೆ ಮಧ್ಯೆ ಅಪಘಾತಕ್ಕೀಡಾದ ವ್ಯಕ್ತಿಯನ್ನು ವಿಚಾರಿಸಿ, ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!