23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ ಗ್ರಾ.ಪಂ. ಗ್ರಾಮ ಸಭೆ

ಆರಂಬೋಡಿ ಗ್ರಾಮ‌ಪಂಚಾಯತ್ ನ 2023-24 ನೇ ಸಾಲಿನ ದ್ವೀತಿಯ ಸುತ್ತಿನ ಗ್ರಾಮ‌ಸಭೆಯು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಜಯರವರ ಅಧ್ಯಕ್ಷತೆಯಲ್ಲಿ ಹೊಕ್ಕಾಡಿಗೋಳಿ ಶಾಲೆಯಲ್ಲಿ ಫೆ. 29 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಚಂದ್ರಶೇಖರ್ ಗ್ರಾಮಸಭೆಯನ್ನು ಮುನ್ನಡೆಸಿದರು.

ನಾರಾಯಣ ಗುರು ಸರ್ಕಲ್ ಮಾಡಿ ಗ್ರಾಮಸ್ಥರ ಬೇಡಿಕೆಯನ್ನು ಈಡೇರಿಸಿದ ಪಂಚಾಯತ್ ಗೆ ಗ್ರಾಮಸ್ಥ ಹರೀಶ್ ರವರು ಅಭಿನಂದನೆ ತಿಳಿಸಿದರು.

ಅಬ್ಬನಲ್ಕೆ ಮತ್ತು ತುಂಬೆಯಲ್ಲಿ ಟಿಸಿ ಅಳವಡಿಸುವ ಬಗ್ಗೆ ಗ್ರಾಮಸ್ಥರ ಬೇಡಿಕೆಯಿತ್ತು ಇಗಾಗಲೇ ಟಿಸಿ ಅಳವಡಿಸಲಾಗಿದೆ ಮೆಸ್ಕಾಂ ಇಲಾಖೆಯ ಕೆಲಸಕ್ಕೆ ಮೆಚ್ಚುಗೆಯಿದೆ ಎಂದು ಗ್ರಾಮಸ್ಥರು ತಿಳಿಸಿದರು.

ಗುಂಡೂರಿನಲ್ಲಿ ವಾರ್ಡ್ ಸಭೆಗೆ ನಾಲ್ಕೂ ಸದಸ್ಯರಲ್ಲಿ ಒಬ್ಬರೂ ಬರಲಿಲ್ಲ.ವಾರ್ಡ್ ಸಭೆಯ ಆಮಂತ್ರಣವನ್ನು ಸದಸ್ಯರಿಗೆ ನಿಡಿಲ್ವ ? ಸದಸ್ಯರೇ ಬರದಿದ್ದರೇ ಗ್ರಾಮಸಭೆಗೆ ಗ್ರಾಮಸ್ಥರು ಬರುತ್ತರಾ ಎಂದು ಗ್ರಾಮಸ್ಥರು ಪ್ರಶ್ನಿಸಿದರು.

ಗುಂಡೂರಿಯಲ್ಲಿ 7 ಬೋರ್ ವೆಲ್ ತೊಡಿಸಿದ್ದೀರಿ. ಇನ್ನೂ ಕಲೆಕ್ಷನ್ ಕೊಡಲಿಲ್ಲ ಯಾಕೆ. ಅವಶ್ಯಕತೆ ಇದ್ದರೆ ಮಾತ್ರ ಬೋರ್ ತೆಗೆಯಬೇಕು. ಇಲ್ಲಂದ್ರೆ ಯಾಕೆ ಎಂದು ಗ್ರಾಮಸ್ಥರು ತಿಳಿಸಿದರು.

5 ಸೆಂಟ್ಸ್ ಕಾಲೋನಿಯ ವಿದ್ಯುತ್ ಕೊರತೆಯನ್ನು ಆದಷ್ಟು ಬೇಗ ನೀಗಿಸಬೇಕು.ಪಾದೆಗುರಿಯಲ್ಲಿ ನೀರಿನ‌ ಪಂಪ್ ಅಳವಡಿಸಬೇಕು.‌ ನೀರಪಲ್ಕೆಯಲ್ಲಿ ಬಸ್ ಸ್ಟ್ಯಾಂಡ್ ಕಳಪೆ ಕಾಮಗಾರಿಯಾಗಿದೆ.ಅಲ್ಲಿಗೆ ಯಾರು ಬರುವಿದಿಲ್ಲ.ಅದರ ಬಗ್ಗೆ ಕ್ರಮ ಕೈಗೊಳ್ಳಬೇಕು.ಇಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಸರಬರಾಜುವಾಗುವುದಿಲ್ಲ,ಈ ಸಮಸ್ಯೆಗಳನ್ನು ಬೇಗ ಸರಿಪಡಿಸಿ ಎಂದು ಗ್ರಾಮಸ್ಥರು ಒತ್ತಾಯಿಸಿದರು.

ಆರಂಬೋಡಿ ಎರಡನೇ ಬ್ಲಾಕ್ ನಲ್ಲಿ ಒಂದು ವಿದ್ಯುತ್ ದೀಪ ಉರಿಯುವುದಿಲ್ಲ, ಆದಷ್ಟು ಬೇಗ ಸರಿಪಡಿಸಬೇಕೆಂದು ಗ್ರಾಮಸ್ಥರು ತಿಳಿಸಿದರು.ಶೀಘ್ರವಾಗಿ ಸರಿಪಡಿಸುವ ಭರವಸೆಯನ್ನು ಪಂಚಾಯತ್ ನೀಡಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಡಾ.ಸ್ಮೃತಿ ಯು ಅನುಪಾಲನಾ ವರದಿ ಸಭೆಯ ಮುಂದಿಟ್ಟರು. ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಬಗ್ಗೆ ತಿಳಿಯಪಡಿಸಿದರು.

ಪಂಚಾಯತ್ ಉಪಾಧ್ಯಕ್ಷ ಪ್ರವೀಣ್ ಚಂದ್ರ ಜೈನ್ ಹಾಗೂ ಸದಸ್ಯರು,ಅಂಗನವಾಡಿ ,ಆಶಾ ಕಾರ್ಯಕರ್ತರು, ಗ್ರಾಮಸ್ಥರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವೃತಾಚರಣೆ

Suddi Udaya

ಕುವೆಟ್ಟು :ಶ್ರೀ ಗುರುನಾರಾಯಣ‌ ಸ್ವಾಮಿ ಸೇವಾ‌ ಸಂಘ ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಕುವೆಟ್ಟು ಗ್ರಾಮ ಸಮಿತಿಯಿಂದ  ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya

“ಸ್ಪೆಕ್ಟ್ರಾ” ಅಸೋಸಿಯೇಶನ್‌ ನ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನ ವಾರ್ಷಿಕೋತ್ಸವ ‘ಆರೋಹಣಮ್

Suddi Udaya

ಎಸೆಸೆಲ್ಸಿ ಫಲಿತಾಂಶ ಪ್ರಕಟ- ಈ ಬಾರಿಯೂ ಬಾಲಕಿಯರೇ ಮೇಲುಗೈ

Suddi Udaya
error: Content is protected !!