July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆ

ಉಜಿರೆ: ಸಮಾಜದ ಪ್ರತಿಯೊಬ್ಬ ಸದಸ್ಯರು ಘಟಕದ ಪ್ರತಿಯೊಂದು ಕಾರ್ಯಕ್ರಮದಲ್ಲಿ ಭಾಗವಹಿಸಿದರೆ ಯಶಸ್ಸು ಸುಲಭ ಸಾಧ್ಯ ಎಂದು ದೇವಾಂಗ ಸಮಾಜ ಉಜಿರೆ ವಲಯದ ಮಾಜಿ ಅಧ್ಯಕ್ಷ ಎಂ.ಡಿ.ಭಾಸ್ಕರ್ ಹೇಳಿದರು.

ಇವರು ಮೂಲಾರು ವಾಸುದೇವ ದೇವಾಂಗ ರವರ ಮನೆಯಲ್ಲಿ ನಡೆದ ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ವಲಯದ ಸಂಘಟನಾ ಕಾರ್ಯದರ್ಶಿ ರೋಹಿತ್ ಕಾಶಿಬೆಟ್ಟು ರವರು ಘಟಕದ ಸಮುದಾಯ ಚಟುವಟಿಕೆಗಳನ್ನು ವಿಸ್ತರಿಸಲು ಆರ್ಥಿಕ ಕ್ರೋಢೀಕರಣ ಮಾಡಬೇಕೆಂದು ಸಲಹೆ ನೀಡಿದರು.

ಸಭೆಯಲ್ಲಿ ವಲಯಾಧ್ಯಕ್ಷ ಮತ್ತು ಮುಂಡಾಜೆ ಗ್ರಾಮ ಪಂಚಾಯತ್ ಸದಸ್ಯ ರವಿ ನೆಯ್ಯಾಲುರವರು ಮುಂಡಾಜೆ ಘಟಕದ ಕಾರ್ಯನಿರ್ವಹಣೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಸಭೆಯ ಅಧ್ಯಕ್ಷತೆಯನ್ನು ದೇವಾಂಗ ಸಮಾಜ ಮುಂಡಾಜೆ ಘಟಕದ ಅಧ್ಯಕ್ಷ ರಾಜಗೋಪಾಲ ವಹಿಸಿದ್ದರು.

ಕು.ಸೌಭಾಗ್ಯ ಪ್ರಾರ್ಥಿಸಿದರು.ಶ್ರೀಮತಿ ಸೌಮ್ಯ ಗಣೇಶ್ ಸ್ವಾಗತಿಸಿದರು.ಸವಿತಾ ಕೇಶವ ದೇವಾಂಗ ವಂದಿಸಿದರು ಘಟಕದ ಕಾರ್ಯದರ್ಶಿ ಮಹೇಂದ್ರ ದೇವಾಂಗ ಕೊಡಂಗೆ ಕಾರ್ಯಕ್ರಮ ನಿರೂಪಿಸಿದರು.

Related posts

ಜು.21: ವಿದ್ಯಾಶ್ರೀ ಅಡೂರ್ ರವರ ಬಹುನಿರೀಕ್ಷೆಯ ಸಂಕಲನ ಪಯಣ ಬಿಡುಗಡೆ

Suddi Udaya

ಸರಕಾರಿ ನೌಕರರ ಜಿಲ್ಲಾ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ: ಹೇಮಚಂದ್ರರಿಗೆ ಪ್ರಥಮ ಸ್ಥಾನ

Suddi Udaya

ಮೇಲಂತಬೆಟ್ಟು: ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

Suddi Udaya

ಮದ್ದಡ್ಕ: ಬಾವುಟಗುಡ್ಡೆ ನಿವಾಸಿ ಸುನೀತ ಶೆಣೈ ನಿಧನ

Suddi Udaya

ಬೆಳ್ತಂಗಡಿ ತಾಲೂಕು 19 ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಬಿ. ಭುಜಬಲಿ ಧರ್ಮಸ್ಥಳ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಅಭಿವಂದನಾ ಕಾರ್ಯಕ್ರಮ: ಚಲನಚಿತ್ರ ನಟ ವಿಜಯ ರಾಘವೇಂದ್ರ ಭಾಗಿ

Suddi Udaya
error: Content is protected !!