September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆ

ಉಜಿರೆ: ಸಮಾಜದ ಪ್ರತಿಯೊಬ್ಬ ಸದಸ್ಯರು ಘಟಕದ ಪ್ರತಿಯೊಂದು ಕಾರ್ಯಕ್ರಮದಲ್ಲಿ ಭಾಗವಹಿಸಿದರೆ ಯಶಸ್ಸು ಸುಲಭ ಸಾಧ್ಯ ಎಂದು ದೇವಾಂಗ ಸಮಾಜ ಉಜಿರೆ ವಲಯದ ಮಾಜಿ ಅಧ್ಯಕ್ಷ ಎಂ.ಡಿ.ಭಾಸ್ಕರ್ ಹೇಳಿದರು.

ಇವರು ಮೂಲಾರು ವಾಸುದೇವ ದೇವಾಂಗ ರವರ ಮನೆಯಲ್ಲಿ ನಡೆದ ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ವಲಯದ ಸಂಘಟನಾ ಕಾರ್ಯದರ್ಶಿ ರೋಹಿತ್ ಕಾಶಿಬೆಟ್ಟು ರವರು ಘಟಕದ ಸಮುದಾಯ ಚಟುವಟಿಕೆಗಳನ್ನು ವಿಸ್ತರಿಸಲು ಆರ್ಥಿಕ ಕ್ರೋಢೀಕರಣ ಮಾಡಬೇಕೆಂದು ಸಲಹೆ ನೀಡಿದರು.

ಸಭೆಯಲ್ಲಿ ವಲಯಾಧ್ಯಕ್ಷ ಮತ್ತು ಮುಂಡಾಜೆ ಗ್ರಾಮ ಪಂಚಾಯತ್ ಸದಸ್ಯ ರವಿ ನೆಯ್ಯಾಲುರವರು ಮುಂಡಾಜೆ ಘಟಕದ ಕಾರ್ಯನಿರ್ವಹಣೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಸಭೆಯ ಅಧ್ಯಕ್ಷತೆಯನ್ನು ದೇವಾಂಗ ಸಮಾಜ ಮುಂಡಾಜೆ ಘಟಕದ ಅಧ್ಯಕ್ಷ ರಾಜಗೋಪಾಲ ವಹಿಸಿದ್ದರು.

ಕು.ಸೌಭಾಗ್ಯ ಪ್ರಾರ್ಥಿಸಿದರು.ಶ್ರೀಮತಿ ಸೌಮ್ಯ ಗಣೇಶ್ ಸ್ವಾಗತಿಸಿದರು.ಸವಿತಾ ಕೇಶವ ದೇವಾಂಗ ವಂದಿಸಿದರು ಘಟಕದ ಕಾರ್ಯದರ್ಶಿ ಮಹೇಂದ್ರ ದೇವಾಂಗ ಕೊಡಂಗೆ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಬಂಗೇರ ಬಿಗ್ರೇಡ್ ವತಿಯಿಂದ ಶ್ರೀಮತಿ ಬಿನುತಾ ಬಂಗೇರರ ಸಾರಥ್ಯದಲ್ಲಿ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ನೂತನ ಸದಸ್ಯರಾಗಿ ಸಂತೋಷ್ ಕುಮಾರ್ ಉಂಬೆಜೆ ಆಯ್ಕೆ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಮೂರನೇ ಕಾದಂಬರಿ “ಅಚ್ಚಣ್ಣ ಭಟ್ರು” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರ್ ಜಿಲ್ಲಾ ಈಜು ಸ್ಪರ್ಧೆ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ನಾರಾವಿ: ಬೈಕ್ ಗೆ ಡಿಕ್ಕಿ ಹೊಡೆದ ಆಟೋರಿಕ್ಷಾ : ಬೈಕ್ ಸವಾರರಿಗೆ ಗಾಯ

Suddi Udaya
error: Content is protected !!