22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ವಿಕಲಚೇತನರ ವಿಶೇಷ ಗ್ರಾಮ ಸಭೆ

ನಿಡ್ಲೆ ಗ್ರಾಮದ ವಿಕಲಚೇತನರ ವಿಶೇಷ ಗ್ರಾಮ ಸಭೆ ನಿಡ್ಲೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಫೆ.27 ರಂದು ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಶ್ರೀಮತಿ ಶ್ಯಾಮಲ ಇವರ ಅಧ್ಯಕ್ಷತೆ ಯಲ್ಲಿ ನಡೆಸಲಾಯಿತು.


ಮುಖ್ಯ ಅತಿಥಿಗಳಾಗಿ ಪಂಚಾಯಿತಿನ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್.ಎಂ, ಗ್ರಾಮ ಪಂಚಾಯಿತಿನ ಸದಸ್ಯರಾದ ಶ್ರೀಮತಿ ಹೇಮಾವತಿ.ಕೆ, ಮೋಹನ್ ಪೂಜಾರಿ, ಜಗದೀಶ್ ಶೆಟ್ಟಿ ಉಪಸ್ಥಿತರಿದ್ದರು.


ಬೆಳ್ತಂಗಡಿ ತಾಲೂಕಿನ ಪುನರ್ ವಸತಿ ಸಂಯೋಜಕರಾದ ಜೋನ್ ಬ್ಯಾಪ್ಟಿಸ್ಟ್ ಡಿಸೋಜಾ ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು. ನಿಡ್ಲೆ ಸಮುದಾಯ ಆರೋಗ್ಯ ಕೇಂದ್ರ ಸಮುದಾಯ ಅಧಿಕಾರಿ ಶ್ರೀಮತಿ ವಿನುತಾ ರವರು ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಿದರು.


ಗ್ರಾಮ ಸಭೆಯಲ್ಲಿ ಗ್ರಾಮೀಣ ವಿಕಲಚೇತನರ ಪುನರ್ವಸತಿ ಕಾರ್ಯಕರ್ತೆಯಾದ ಕುಮಾರಿ ಹೇಮಲತಾ ಇವರು ವಾರ್ಷಿಕ ವರದಿಯನ್ನು ಮಂಡಿಸಿದರು. ಗ್ರಾಮ ಸಭೆಯಲ್ಲಿ ಒಟ್ಟು ಆರು ಜನ ವಿಕಲಚೇತನ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ನೀರಿನ ಬಾಟಲಿಗಳನ್ನು ವಿತರಿಸಲಾಯಿತು.


ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿಕಲಚೇತನ ಫಲಾನುಭವಿಗಳು, ಆಶಾ ಕಾರ್ಯಕರ್ತೆಯರು, ಪಂಚಾಯಿತಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು ಪಂಚಾಯತ್ ಪಂಚಾಯತ್ ಅಭಿವೃದ್ದಿ ಅಧಿಕಾರಿ ದೀಪಕ್ ರಾಜ್.ಎಂ ಸ್ವಾಗತಿಸಿದರು, ಕಾರ್ಯದರ್ಶಿಯಾದ ಕೆ.ಪಿ.ಕೇಶವ ಗೌಡ ನಿರೂಪಿಸಿದರು.

Related posts

ಮಾಚಾರ್ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಯಲ್ಲಿ 78ರ ಸ್ವಾತಂತ್ರ್ಯ ಸಂಭ್ರಮ ಹಾಗೂ ಪವರ್ ಮೆನ್‌ಗೆ ಗೌರವಾರ್ಪಣೆ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಮೇ 17ರಂದು ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಪ್ರಪ್ರಥಮ ಬಾರಿಗೆ ಕನ್ನಡ ಸಾಹಿತ್ಯ ಸಂಭ್ರಮ’ ಮತ್ತು ಬಹುಭಾಷಾ ಕವಿಗೋಷ್ಠಿ’ ಎಂಬ ವಿನೂತನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸವಿತಾ ಸಮಾಜದ ವತಿಯಿಂದ ಪೂವಪ್ಪ ಭಂಡಾರಿ ಹಾಗೂ ಮೋಹನ್ ಭಂಡಾರಿ ರವರಿಗೆ ಸನ್ಮಾನ

Suddi Udaya

ಪಟ್ರಮೆ: ರಸ್ತೆ ಅಭಿವೃದ್ದಿಗಾಗಿ ಹೋರಾಟ ಸಮಿತಿ ರಚನೆ

Suddi Udaya
error: Content is protected !!