23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ: ಮೈರಲ್ಕೆ ಪಶುಪತಿ ಕೃಪಾ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರರ ಪ್ರಾಯೋಜಕತ್ವದಲ್ಲಿ “ಕುಮಾರ ವಿಜಯ” ಯಕ್ಷಗಾನ ಹಾಗೂ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಸೇವೆಸಲ್ಲಿಸಿದ ಕರಸೇವಕರಿಗೆ ಗೌರವಾರ್ಪಣೆ

ಓಡಿಲ್ನಾಳ: ಪಶುಪತಿ ಕೃಪಾ ಯಕ್ಷಗಾನ ಬಯಲಾಟ ಸಮಿತಿ ಮೈರಲ್ಕೆ ಓಡಿಲ್ನಾಳ ಇದರ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರರ ಪ್ರಾಯೋಜಕತ್ವದಲ್ಲಿ ಫೆ 29 ರಂದು ಆದಿ ಧೂಮಾವತಿ ಶ್ರೀ ದೇಯಿಬೈದೆತಿ ಕೃಪಾ ಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಇವರಿಂದ ಕುಮಾರ ವಿಜಯ (ಶೂರ ಪದ್ಮಾಸುರ ಕಾಳಗ) ಯಕ್ಷಗಾನ ಹಾಗೂ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರಾದ ಸಮಯದಲ್ಲಿ ದಿನ ನಿತ್ಯ ಕರಸೇವಕರಾಗಿ ಶ್ರಮದಾನದಲ್ಲಿ ಬಾಗಿಯಾದವರನ್ನು ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಮತ್ತು ಓಡಿಲ್ನಾಳ ಧರ್ಮೋಸ್ಥಾನ ಟ್ರಸ್ಟ್ (ರಿ) ಮೈರಲ್ಕೆ ಇವರ ವತಿಯಿಂದ ಗೌರವಾರ್ಪಣೆ ಕಾರ್ಯಕ್ರಮ ದೇವಸ್ಥಾನದ ವಠಾರದಲ್ಲಿ ಜರಗಿತು.

ರಾತ್ರಿ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಿಶೇಷ ಪೂಜೆ ನೆರವೇರಿಸಿ, ನಂತರ ಚೌಕಿ ಪೂಜೆ ಜರಗಿತು. ಕಾರ್ಯಕ್ರಮದಲ್ಲಿ ಡಾ| ರಾಜರಾಮ್ ಉಪ್ಪಿನಂಗಡಿ. ಮನೋಹರ ಕುಮಾರ್ ವಕೀಲರು ಬೆಳ್ತಂಗಡಿ. ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯ ವಿಕ್ರಮ್. ಧರಣೇಂದ್ರ ಕುಮಾರ್. ಬೆಸ್ಟ್ ಪೌಂಡೇಶನ್ ಬೆಳ್ತಂಗಡಿ ಅಧ್ಯಕ್ಷ ರಕ್ಷಿತ್ ಶಿವರಾಮ್ , ಶ್ರೀ ಕುದ್ರೋಳಿ ಗೋಕರ್ಣನಾಥ ಕ್ಷೇತ್ರ ಮಂಗಳೂರು ಕೋಶಾಧಿಕಾರಿ ಪದ್ಮರಾಜ್ ಆರ್ ., ಗೋಪಿನಾಥ್ ನಾಯಕ್ ಗುರುವಾಯನಕೆರೆ ಆಗಮಿಸಿದ್ದರು.

ಈ ಸಂದರ್ಭದಲ್ಲಿ ಎಸ್ ಗಂಗಾಧರ್ ಭಟ್ ಕೆವುಡೇಲು, ಚಂದ್ರಹಾಸ್ ಕೇದೆ, ವ್ರಷಭ ಆರಿಗ ಆಡಳಿತ ಮೊಕ್ತೇಸರರು ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮೈರಲ್ಕೆ, ಯಕ್ಷಗಾನ ಬಯಲಾಟ ಸಮಿತಿ ಸ್ಥಾಪಕಾಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರ್, ಅಧ್ಯಕ್ಷ ಸೋಮನಾಥ ಬಿ. , ಟ್ರಸ್ಟಿಗಳಾದ ಸತೀಶ್ ಪೊಕ್ಕಿ, ವೆಂಕಪ್ಪ ಗೌಡ, ಉಪಾಧ್ಯಕ್ಷರಾದ ಕೇಶವ ನಾಯ್ಕ್ ಬೊಳ್ಳಂತ್ತಾರು, ಪ್ರಭಾಕರ ಶಾಂತಿ ಕೋಡಿ, ಹರಿಪ್ರಸಾದ್ ಇರ್ವತ್ರಾಯ ತಂಗೋಯಿ, ಅನಂತ್ ಎಸ್ ಇರ್ವತ್ರಾಯ ತಂಗೋಯಿ, ಅರುಣ ಶೆಟ್ಟಿ ಮಠ, ಮೋಹನ ಶೆಟ್ಟಿ ಕೆರೆಕಜೆ, ಶೇಖರ ಶಾಂತಿಕೋಡಿ, ಸುರೇಶ್ ಶೆಟ್ಟಿ ಪರಾರಿ, ಪ್ರಧಾನ ಕಾರ್ಯದರ್ಶಿ ಅನೂಪ್ ಬಂಗೇರ ಮದ್ದಡ್ಕ, ಕಾರ್ಯದರ್ಶಿಗಳಾದ ವಿಜಯ ಕೊಂಡೆಮಾರ್. ದೇಜಮ್ಮ ಕೆರೆಕೊಡಿ, ಮಾಲತಿ ನಾನಾಡಿ, ಸುಧಾ ಶೆಟ್ಟಿ ಮೈರಲ್ಕೆ, ಗುಲಾಬಿ ಭದ್ರಕಜೆ, ಶಾಲಿನಿ ಮಠ, ಲೀಲಾವತಿ ಮಡಂತಿಲ, ಶಶಿಕಲಾ ಕೆರೆಕಜೆ, ಕೋಶಾಧಿಕಾರಿ ಸತೀಶ್‌ ಪೊಕ್ಕಿ, ಸದಸ್ಯರಾದ ರಾಘವೇಂದ್ರ ಗೌಡ ಕರ್ನಂತ್ತೋಡಿ . ಶಿವಪ್ಪ ನಾಯ್ಕ ರೇಷ್ಮೆ, ಹರೀಶ್ ನಾಯ್ಕ್ ರೇಷ್ಮೆ, ನಾಗೇಶ್ ಪೂಜಾರಿ ಅದೇಲು,ಸತೀಶ್ ಬನ ,ರಾಜೇಶ್ ಶೆಟ್ಟಿ ಅಶ್ವಥ ನಗರ ಮತ್ತಿತರರು ಉಪಸ್ಥಿತರಿದ್ದರು.

Related posts

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾಮಹೋತ್ಸವ: ದೇವರಿಗೆ ಪಂಚಾಮೃತ ಅಭಿಷೇಕ

Suddi Udaya

ಕಲ್ಮಂಜ: ನಿಡಿಗಲ್ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಆಟಿಡೊಂಜಿ ದಿನ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ, ಅಶಕ್ತ ಕುಟುಂಬಕ್ಕೆ ಆರ್ಥಿಕ ನೆರವು,ಮನೆ ಹಸ್ತಾಂತರ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ್ವಿತೀಯ ಸೋಪಾನ ಪರೀಕ್ಷೆ: ಉಜಿರೆ ಎಸ್ ಡಿ ಎಂ ಆಂ.ಮಾ. ಶಾಲೆ ವಿದ್ಯಾರ್ಥಿನಿಯರು ತೇರ್ಗಡೆ

Suddi Udaya

ಬೆಳ್ತಂಗಡಿ ಜೆಪಿ ಅಟ್ಟಾಕ್ರ್ಸ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!