25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ: ಮೈರಲ್ಕೆ ಪಶುಪತಿ ಕೃಪಾ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರರ ಪ್ರಾಯೋಜಕತ್ವದಲ್ಲಿ “ಕುಮಾರ ವಿಜಯ” ಯಕ್ಷಗಾನ ಹಾಗೂ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಸೇವೆಸಲ್ಲಿಸಿದ ಕರಸೇವಕರಿಗೆ ಗೌರವಾರ್ಪಣೆ

ಓಡಿಲ್ನಾಳ: ಪಶುಪತಿ ಕೃಪಾ ಯಕ್ಷಗಾನ ಬಯಲಾಟ ಸಮಿತಿ ಮೈರಲ್ಕೆ ಓಡಿಲ್ನಾಳ ಇದರ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರರ ಪ್ರಾಯೋಜಕತ್ವದಲ್ಲಿ ಫೆ 29 ರಂದು ಆದಿ ಧೂಮಾವತಿ ಶ್ರೀ ದೇಯಿಬೈದೆತಿ ಕೃಪಾ ಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಇವರಿಂದ ಕುಮಾರ ವಿಜಯ (ಶೂರ ಪದ್ಮಾಸುರ ಕಾಳಗ) ಯಕ್ಷಗಾನ ಹಾಗೂ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರಾದ ಸಮಯದಲ್ಲಿ ದಿನ ನಿತ್ಯ ಕರಸೇವಕರಾಗಿ ಶ್ರಮದಾನದಲ್ಲಿ ಬಾಗಿಯಾದವರನ್ನು ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಮತ್ತು ಓಡಿಲ್ನಾಳ ಧರ್ಮೋಸ್ಥಾನ ಟ್ರಸ್ಟ್ (ರಿ) ಮೈರಲ್ಕೆ ಇವರ ವತಿಯಿಂದ ಗೌರವಾರ್ಪಣೆ ಕಾರ್ಯಕ್ರಮ ದೇವಸ್ಥಾನದ ವಠಾರದಲ್ಲಿ ಜರಗಿತು.

ರಾತ್ರಿ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಿಶೇಷ ಪೂಜೆ ನೆರವೇರಿಸಿ, ನಂತರ ಚೌಕಿ ಪೂಜೆ ಜರಗಿತು. ಕಾರ್ಯಕ್ರಮದಲ್ಲಿ ಡಾ| ರಾಜರಾಮ್ ಉಪ್ಪಿನಂಗಡಿ. ಮನೋಹರ ಕುಮಾರ್ ವಕೀಲರು ಬೆಳ್ತಂಗಡಿ. ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯ ವಿಕ್ರಮ್. ಧರಣೇಂದ್ರ ಕುಮಾರ್. ಬೆಸ್ಟ್ ಪೌಂಡೇಶನ್ ಬೆಳ್ತಂಗಡಿ ಅಧ್ಯಕ್ಷ ರಕ್ಷಿತ್ ಶಿವರಾಮ್ , ಶ್ರೀ ಕುದ್ರೋಳಿ ಗೋಕರ್ಣನಾಥ ಕ್ಷೇತ್ರ ಮಂಗಳೂರು ಕೋಶಾಧಿಕಾರಿ ಪದ್ಮರಾಜ್ ಆರ್ ., ಗೋಪಿನಾಥ್ ನಾಯಕ್ ಗುರುವಾಯನಕೆರೆ ಆಗಮಿಸಿದ್ದರು.

ಈ ಸಂದರ್ಭದಲ್ಲಿ ಎಸ್ ಗಂಗಾಧರ್ ಭಟ್ ಕೆವುಡೇಲು, ಚಂದ್ರಹಾಸ್ ಕೇದೆ, ವ್ರಷಭ ಆರಿಗ ಆಡಳಿತ ಮೊಕ್ತೇಸರರು ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮೈರಲ್ಕೆ, ಯಕ್ಷಗಾನ ಬಯಲಾಟ ಸಮಿತಿ ಸ್ಥಾಪಕಾಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರ್, ಅಧ್ಯಕ್ಷ ಸೋಮನಾಥ ಬಿ. , ಟ್ರಸ್ಟಿಗಳಾದ ಸತೀಶ್ ಪೊಕ್ಕಿ, ವೆಂಕಪ್ಪ ಗೌಡ, ಉಪಾಧ್ಯಕ್ಷರಾದ ಕೇಶವ ನಾಯ್ಕ್ ಬೊಳ್ಳಂತ್ತಾರು, ಪ್ರಭಾಕರ ಶಾಂತಿ ಕೋಡಿ, ಹರಿಪ್ರಸಾದ್ ಇರ್ವತ್ರಾಯ ತಂಗೋಯಿ, ಅನಂತ್ ಎಸ್ ಇರ್ವತ್ರಾಯ ತಂಗೋಯಿ, ಅರುಣ ಶೆಟ್ಟಿ ಮಠ, ಮೋಹನ ಶೆಟ್ಟಿ ಕೆರೆಕಜೆ, ಶೇಖರ ಶಾಂತಿಕೋಡಿ, ಸುರೇಶ್ ಶೆಟ್ಟಿ ಪರಾರಿ, ಪ್ರಧಾನ ಕಾರ್ಯದರ್ಶಿ ಅನೂಪ್ ಬಂಗೇರ ಮದ್ದಡ್ಕ, ಕಾರ್ಯದರ್ಶಿಗಳಾದ ವಿಜಯ ಕೊಂಡೆಮಾರ್. ದೇಜಮ್ಮ ಕೆರೆಕೊಡಿ, ಮಾಲತಿ ನಾನಾಡಿ, ಸುಧಾ ಶೆಟ್ಟಿ ಮೈರಲ್ಕೆ, ಗುಲಾಬಿ ಭದ್ರಕಜೆ, ಶಾಲಿನಿ ಮಠ, ಲೀಲಾವತಿ ಮಡಂತಿಲ, ಶಶಿಕಲಾ ಕೆರೆಕಜೆ, ಕೋಶಾಧಿಕಾರಿ ಸತೀಶ್‌ ಪೊಕ್ಕಿ, ಸದಸ್ಯರಾದ ರಾಘವೇಂದ್ರ ಗೌಡ ಕರ್ನಂತ್ತೋಡಿ . ಶಿವಪ್ಪ ನಾಯ್ಕ ರೇಷ್ಮೆ, ಹರೀಶ್ ನಾಯ್ಕ್ ರೇಷ್ಮೆ, ನಾಗೇಶ್ ಪೂಜಾರಿ ಅದೇಲು,ಸತೀಶ್ ಬನ ,ರಾಜೇಶ್ ಶೆಟ್ಟಿ ಅಶ್ವಥ ನಗರ ಮತ್ತಿತರರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರಿಗೆ ಕಾಳುಮೆಣಸಿನ ಸುಧಾರಿತ ತಾಂತ್ರಿಕತೆಗಳ ತರಬೇತಿ ಕಾರ್ಯಕ್ರಮ

Suddi Udaya

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ- ಜಿಲ್ಲಾಧ್ಯಕ್ಷರ ಕಾರು ತಪಾಸಣೆ ನಡೆಸಿದ ಅಧಿಕಾರಿಗಳು

Suddi Udaya

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya

ಕುಂಭಶ್ರೀ ಪ.ಪೂ. ಕಾಲೇಜಿನಲ್ಲಿ ಸಂಕಲ್ಪ–2026: ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿ ತೋರಿದ ಪ್ರೇರಣಾದಾಯಕ ಓರಿಯಂಟೇಷನ್ ಕಾರ್ಯಕ್ರಮ

Suddi Udaya

ಕನ್ಯಾಡಿಯಲ್ಲಿ ‘ಸ್ಪೂರ್ತಿ’ ಹೊಸ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

Suddi Udaya
error: Content is protected !!