September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಮನೋಹರ್ ಪ್ರಸಾದ್ ನಿಧನ

ಮಂಗಳೂರು: ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಹಾಗೂ ಕವಿ ಮನೋಹರ್ ಪ್ರಸಾದ್ ಅವರು ಇಂದು(ಮಾ.1) ಮುಂಜಾನೆ ನಿಧನರಾಗಿದ್ದಾರೆ.

ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು.
ಬಳಿಕ “ಉದಯವಾಣಿ’ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಆಗಿದ್ದ ಅವರು ಬಳಿಕ ಸಹಾಯಕ ಸಂಪಾದಕರಾಗಿದ್ದರು ಇದರೊಂದಿಗೆ ಉದಯವಾಣಿಯಲ್ಲಿ ಸತತ 36 ವರ್ಷಗಳ ಸೇವೆ ಸಲ್ಲಿಸಿದ್ದ ಅವರು ಕಳೆದ ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.

ಮುದ್ರಣ ಮಾಧ್ಯಮಕ್ಕೆ ನೀಡಿರುವ ಅಪಾರ ಸೇವೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ

Related posts

ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬಕ್ಕೆ ಲೈಟಿಂಗ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ 9 ನೇ ತರಗತಿ ವಿದ್ಯಾರ್ಥಿ ಸಾವು

Suddi Udaya

ಉಜಿರೆ ಎಸ್.ಡಿ.ಎಂ ಸಿಬಿಎಸ್ಇ ಶಾಲೆಯಲ್ಲಿ ‘ಕಲಾಬ್ದಿ – 2025’ ಗೆ ಚಾಲನೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ರಿಟ್ ಪಿಟಿಷನ್ ವಜಾ

Suddi Udaya

ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ

Suddi Udaya

ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಚಾಲನೆ

Suddi Udaya
error: Content is protected !!