September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಧರ್ಮಸ್ಥಳ: ಇಲ್ಲಿನ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.28 ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನಡೆಯಿತು.

ಮುಖ್ಯ ಶಿಕ್ಷಕ ಸುಬ್ರಹ್ಮ ಣ್ಯ ರಾವ್ ಅವರು ಮಾತನಾಡಿ, ಭಾರತ ರತ್ನ ಸರ್ ಸಿ ವಿ ರಾಮನ್ ಅವರ ಜನ್ಮದಿನದ ಬಗ್ಗೆ ಮಾತನಾಡಿದರು. “ಭಾರತ ಕಂಡ ಶ್ರೇಷ್ಠ ವಿಜ್ಞಾನಿಯ ಜನ್ಮ ದಿನಾಚರಣೆಯ ನಿಮಿತ್ತ ಈ ದಿನವನ್ನು ನಾವು ನೆನಪಿಸಿಕೊಳ್ಳುವುದರ ಜೊತೆಗೆ ನಾವು ಕಂಡ ವಿಚಾರದ ಬಗ್ಗೆ ಪ್ರಶ್ನಿಸುವ, ವಿಮರ್ಶಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ವೈಚಾರಿಕತೆಯನ್ನು ಬೆಳೆಸಿಕೊಂಡಾಗ ಮಹಾನ್ ಸಂಶೋಧನೆಗಳಿಗೆ ನಾಂದಿಯಾಗುತ್ತದೆ” ಎಂದರು.

ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರಯುಕ್ತ ವೈಚಾರಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವ ಪ್ರತಿಜ್ಞಾ ವಿಧಿಯನ್ನು ಶಿಕ್ಷಕಿ ಉಷಾ ಕುಮಾರಿ ಬೋಧಿಸಿದರು.

ಶಿಕ್ಷಕ ಶೇಖರ್ ಗೌಡ ನಿರೂಪಿಸಿದರು. ಶಿಕ್ಷಕಿ ಕಾವ್ಯಾ ಸ್ವಾಗತಿಸಿ, ಧನ್ಯವಾದವಿತ್ತರು.

ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಲಾಯಿತು.

Related posts

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ನೈತಿಕ ಶಿಕ್ಷಣ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಮರುಮೌಲ್ಯಮಾಪನ: ಎಸ್‌ಡಿಎಂ ಪಿಯು ಕಾಲೇಜಿನ ವಿದ್ಯಾರ್ಥಿನಿಯರ ಅದ್ಭುತ ಸಾಧನೆ

Suddi Udaya

ವೈಯಕ್ತಿಕ ದ್ವೇಷ ಹಿನ್ನೆಲೆ ವ್ಯಕ್ತಿಯ ಮೇಲೆ ಹಲ್ಲೆ – ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹ

Suddi Udaya

ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಡಿ.28-ಜ.2: ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!