25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯ ಪತ್ರಕರ್ತ ಮನೋಹರ ಪ್ರಸಾದ್‌ರವರ ನಿಧನಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ


ಧರ್ಮಸ್ಥಳ: ಹಿರಿಯ ಪತ್ರಕರ್ತರಾದ ಮನೋಹರ ಪ್ರಸಾದ್‌ರ ನಿಧನದ ಸುದ್ದಿ ತಿಳಿದು ವಿಷಾದವಾಯಿತು.
ಅನುಭವಿ ಪತ್ರಕರ್ತ, ಉತ್ತಮ ವಾಗ್ಮಿ, ಚಿಂತಕ ಹಾಗೂ ಆದರ್ಶ ಕಾರ್ಯಕ್ರಮ ನಿರ್ವಾಹಕ, ಸಹೃದಯಿಯಾದ ಅವರು ನಮ್ಮ ಕ್ಷೇತ್ರದ ಅಪಾರ ಅಭಿಮಾನಿಯೂ, ಭಕ್ತರೂ ಆಗಿದ್ದರು.


ಅವರ ಲೇಖನಗಳು ಅಧಿಕೃತ ಮಾಹಿತಿಯ ಕಣಜವಾಗಿದ್ದು, ಕುತೂಹಲದಿಂದ ಓದಿಸಿಕೊಂಡು ಹೋಗುತ್ತವೆ.
ಧರ್ಮಸ್ಥಳದಲ್ಲಿ ನಡೆಯುವ ಲಕ್ಷದೀಪೋತ್ಸವ, ಮಸ್ತಕಾಭಿಷೇಕ, ಮಹಾನಡಾವಳಿ, ಉಜಿರೆಯಲ್ಲಿ ನಡೆದ ವಿಶ್ವತುಳುಸಮ್ಮೇಳನ, ಕೃಷಿಮೇಳ, ಮೊದಲಾದ ಸಂದರ್ಭಗಳಲ್ಲಿ ಅವರು ಉದಯವಾಣಿಯಲ್ಲಿ ವಿಶೇಷ ಲೇಖನ, ಪುರವಣಿಗಳನ್ನು ಪ್ರಕಟಿಸಿ ಉತ್ತಮ ಸೇವೆ ನೀಡಿದ್ದಾರೆ.


ಅವರು ಹೇಳಿದ ಒಂದು ಸಂದರ್ಭ ನನಗೆ ಸದಾ ನೆನಪಿನಲ್ಲಿದೆ. ಒಮ್ಮೆ ರಾಮ, ಲಕ್ಷ್ಮಣರು ಕೇರಳಕ್ಕೆ ಹೋದಾಗ, ರಾಮನಿಗೆ ಬಾಯಾರಿಕೆಯಾಯಿತಂತೆ ಆಗ ಲಕ್ಷ್ಮಣನಲ್ಲಿ ನೀರು ತಂದುಕೊಡಲು ಹೇಳಿದ. ಒಮ್ಮೆ ಆಗುವುದಿಲ್ಲ ಎಂದು ಹೇಳಿದ ಲಕ್ಷ್ಮಣ, ಕೊಂಚ ಸಮಯದ ಬಳಿಕ ನೀರು ತಂದುಕೊಟ್ಟ. ಹೀಗೆ ಒಮ್ಮೆಲೆ ಒಪ್ಪಿಕೊಳ್ಳುವ ಬದಲು ಮೊದಲು ಪ್ರತಿಭಟಿಸಿ, ಮತ್ತೆ ಕಾರ್ಯ ಮಾಡುವುದು. ತುಂಬಾ ಪರಿಣಾಮಕಾರಿಯಾಗಿದೆ ಎಂಬುದು ಇದರ ತಾತ್ಪರ್ಯ.


ಅವರ ನಿಧನ ಪತ್ರಿಕಾರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದರು.

Related posts

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಸೆ.6-7-8 : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಂಸ್ಕೃತ ಮತ್ತು ಗಣಿತ ವಿಭಾಗದ ಜಂಟಿ ಆಯೋಗದಲ್ಲಿ “ಗಣಿತ ಸಂಸ್ಕೃತ ಸಂಗಮ “

Suddi Udaya

ತಾಲೂಕಿನ ಹಲವೆಡೆ ಉತ್ತಮ ಮಳೆ

Suddi Udaya

ಶಿರ್ತಾಡಿ : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ: ಆಕ್ಟಿವಾ ಸವಾರೆ, ಶಿಕ್ಷಕಿ ಮೃತ್ಯು

Suddi Udaya

ನೀಟ್ ಫಲಿತಾಂಶ ಪ್ರಕಟ: ರಾಷ್ಟ್ರಮಟ್ಟದಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya
error: Content is protected !!