25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ: ಪೆರಿಂಜೆ ಮಲಿಯಾಳ ಪಲ್ಕೆಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಹೊಸಂಗಡಿ : ಪೆರಿಂಜೆ ಮಲಿಯಾಳ ಪಲ್ಕೆ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ ನಡೆದ್ದಿದ್ದು ಈ ಬಗ್ಗೆ ಫೆ.29ರಂದು ವರದಿಯಾಗಿದೆ.

ಬೆಳ್ತಂಗಡಿ ತಾಲೂಕು ಹೊಸಂಗಡಿ ಗ್ರಾಮದ ಪೆರಿಂಜೆ ಮಲಿಯಾಳ ಪಲ್ಕೆ ಎಂಬಲ್ಲಿ ಆರಂಬೋಡಿ – ಪಡ್ಯಾರಬೆಟ್ಟು ಸಾರ್ವಜನಿಕ ಡಾಮಾರು ರಸ್ತೆಯಲ್ಲಿ ಬೊಳ್ಳಾಜೆ ಎಂಬಲ್ಲಿಂದ ಶಾಂತಿಕಾಡು ಕಡೆಗೆ ವಸಂತರವರು ಸಹಸವಾರರಾಗಿ ಸವಾರಿ ಮಾಡಿಕೊಂಡು ಬರುತ್ತಿದ್ದ ದ್ವಿಚಕ್ರ ವಾಹನ ನಂ: ಕೆಎ 19 ಹೆಚ್‌ ಎನ್‌ 0984 ನೇದನ್ನು ಆರೋಪಿತ ಸವಾರ ಎಡ್ವರ್ಡ್‌ ಎಂಬವರು ಇಳಿಜಾರು ಹಾಗೂ ಕಿರಿದಾದ ಪ್ರದೇಶದಲ್ಲಿ ಎದುರಿನಿಂದ ಅಂದರೆ ಪಡ್ಯಾರಬೆಟ್ಟು ಕಡೆಯಿಂದ ಬರುತ್ತಿದ್ದ ಟಿಪ್ಪರ್‌ ಲಾರಿಯನ್ನು ಕಂಡು ಒಮ್ಮೆಲೆ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ರಸ್ತೆಯ ತೀರಾ ಎಡಬದಿಗೆ ಚಲಾಯಿಸಿದ ಪರಿಣಾಮ ದ್ವಿಚಕ್ರ ವಾಹನವು ಡಾಮಾರು ರಸ್ತೆಯ ಅಂಚಿನಲ್ಲಿ ಅಂದರೆ ತಗ್ಗು(ಗುಂಡಿ) ಪ್ರದೇಶದಲ್ಲಿ ಚಲಾಯಿಸಿದಾಗ ಸಹಸವಾರರಾಗಿ ಕುಳಿತಿದ್ದ ವಸಂತರವರ ಹಿಡಿತ ತಪ್ಪಿ ದ್ವಿಚಕ್ರ ವಾಹನದಿಂದ ರಸ್ತೆಗೆ ಕುಸಿದು ಬಿದ್ದು, ಬೆನ್ನಿಗೆ ಗುದ್ದಿದ ಪರಿಣಾಮ ತೀವ್ರ ನೋವುಂಟಾದವರನ್ನು ಆರೋಪಿ ಸವಾರ ಹಾಗೂ ಇತರರು ಸೇರಿ ಖಾಸಗಿ ವಾಹನದಲ್ಲಿ ಕಾರ್ಕಳದ ಸ್ಪಂದನಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿರುತ್ತಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

Related posts

ಪುತ್ತಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ ಭೇಟಿ

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಫ್ರೆಶರ್ಸ್ ಡೇ, ವಿದ್ಯಾರ್ಥಿ ಪರಿಷತ್ ಉದ್ಘಾಟನೆ ಹಾಗೂ ಪ್ರತಿಭಾ ಸನ್ಮಾನ

Suddi Udaya

ಉಜಿರೆಯಲ್ಲಿ ಕುಳಿತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಧರ್ಮಸ್ಥಳ ಯೋಜನೆಯ ಕಾರ್ಯಕ್ರಮ: ರಾಜ್ಯಾದ್ಯಂತ 1000 ಶಾಲೆಗಳಿಗೆ ಜ್ಞಾನದೀಪ ಗೌರವ ಶಿಕ್ಷಕರ ನಿಯೋಜನೆ

Suddi Udaya
error: Content is protected !!