ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ: ಪೆರಿಂಜೆ ಮಲಿಯಾಳ ಪಲ್ಕೆಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಹೊಸಂಗಡಿ : ಪೆರಿಂಜೆ ಮಲಿಯಾಳ ಪಲ್ಕೆ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ ನಡೆದ್ದಿದ್ದು ಈ ಬಗ್ಗೆ ಫೆ.29ರಂದು ವರದಿಯಾಗಿದೆ.

ಬೆಳ್ತಂಗಡಿ ತಾಲೂಕು ಹೊಸಂಗಡಿ ಗ್ರಾಮದ ಪೆರಿಂಜೆ ಮಲಿಯಾಳ ಪಲ್ಕೆ ಎಂಬಲ್ಲಿ ಆರಂಬೋಡಿ – ಪಡ್ಯಾರಬೆಟ್ಟು ಸಾರ್ವಜನಿಕ ಡಾಮಾರು ರಸ್ತೆಯಲ್ಲಿ ಬೊಳ್ಳಾಜೆ ಎಂಬಲ್ಲಿಂದ ಶಾಂತಿಕಾಡು ಕಡೆಗೆ ವಸಂತರವರು ಸಹಸವಾರರಾಗಿ ಸವಾರಿ ಮಾಡಿಕೊಂಡು ಬರುತ್ತಿದ್ದ ದ್ವಿಚಕ್ರ ವಾಹನ ನಂ: ಕೆಎ 19 ಹೆಚ್‌ ಎನ್‌ 0984 ನೇದನ್ನು ಆರೋಪಿತ ಸವಾರ ಎಡ್ವರ್ಡ್‌ ಎಂಬವರು ಇಳಿಜಾರು ಹಾಗೂ ಕಿರಿದಾದ ಪ್ರದೇಶದಲ್ಲಿ ಎದುರಿನಿಂದ ಅಂದರೆ ಪಡ್ಯಾರಬೆಟ್ಟು ಕಡೆಯಿಂದ ಬರುತ್ತಿದ್ದ ಟಿಪ್ಪರ್‌ ಲಾರಿಯನ್ನು ಕಂಡು ಒಮ್ಮೆಲೆ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ರಸ್ತೆಯ ತೀರಾ ಎಡಬದಿಗೆ ಚಲಾಯಿಸಿದ ಪರಿಣಾಮ ದ್ವಿಚಕ್ರ ವಾಹನವು ಡಾಮಾರು ರಸ್ತೆಯ ಅಂಚಿನಲ್ಲಿ ಅಂದರೆ ತಗ್ಗು(ಗುಂಡಿ) ಪ್ರದೇಶದಲ್ಲಿ ಚಲಾಯಿಸಿದಾಗ ಸಹಸವಾರರಾಗಿ ಕುಳಿತಿದ್ದ ವಸಂತರವರ ಹಿಡಿತ ತಪ್ಪಿ ದ್ವಿಚಕ್ರ ವಾಹನದಿಂದ ರಸ್ತೆಗೆ ಕುಸಿದು ಬಿದ್ದು, ಬೆನ್ನಿಗೆ ಗುದ್ದಿದ ಪರಿಣಾಮ ತೀವ್ರ ನೋವುಂಟಾದವರನ್ನು ಆರೋಪಿ ಸವಾರ ಹಾಗೂ ಇತರರು ಸೇರಿ ಖಾಸಗಿ ವಾಹನದಲ್ಲಿ ಕಾರ್ಕಳದ ಸ್ಪಂದನಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿರುತ್ತಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ನೂತನ ಸಮಿತಿಗೆ ತಾಲೂಕಿನ ಐದು ಸದಸ್ಯರ ಆಯ್ಕೆ

Suddi Udaya

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿ ಗರ್ಭಿಣಿ ಪ್ರಕರಣ: ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಪಟ್ರಮೆ: ಅನಾರು ಶಾಲೆ ಬಳಿ ಚರಂಡಿಗೆ ಬಿದ್ದ ಕೋಳಿ ಸಾಗಾಟದ ಲಾರಿ

Suddi Udaya

ಮೂಡುಕೋಡಿಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಉಜಿರೆ: ‘ಮರು ಉತ್ಪಾದನೆಗೆ ಯೋಗ್ಯವಿಲ್ಲದ ಪ್ಲಾಸ್ಟಿಕ್ ತ್ಯಾಜ್ಯದಿಂದ ಡಾಮಾರು ರಸ್ತೆ ನಿರ್ಮಾಣ” ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ

Suddi Udaya
error: Content is protected !!