24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯತದ 2023-24 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಗ್ರಾಪಂ ಅಧ್ಯಕ್ಷೆ ವಿಮಲ ರವರ ಅಧ್ಯಕ್ಷತೆಯಲ್ಲಿ, ಧರ್ಮಸ್ಥಳ ಗ್ರಾಮ ಪಂಚಾಯತ್‌ ಸಭಾಭವನದಲ್ಲಿ ಮಾ.1 ರಂದು ನಡೆಯಿತು.
ನೋಡೆಲ್ ಅಧಿಕಾರಿಯಾಗಿ ಕೊಕ್ಕಡ ಹೋಬಳಿ ಕೇಂದ್ರದ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಗ್ರಾಮಸಭೆ ನಡೆಸಿಕೊಟ್ಟರು.

ಈ ವೇಳೆ ಇಲಾಖಾ ಅಧಿಕಾರಿಗಳು, ಆಶಾಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆ ಉಪಸ್ಥಿತರಿದ್ದು ಮಾಹಿತಿ ನೀಡಿದರು. ಗ್ರಾ.ಪಂ. ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗ್ರಾ.ಪಂ. ಸಿಬ್ಬಂದಿಗಳು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಗ್ರಾಮಸಭೆಯಲ್ಲಿ ಭಾಗವಹಿಸಿದರು.

ಗ್ರಾಮ ಸಭೆ ವರದಿ ಹಾಗೂ ಅನುಪಾಲನಾ ವರದಿಯನ್ನು ಗುಮಾಸ್ತ ದೇವಿಪ್ರಸಾದ್ ಬೊಳ್ಮ ಮಂಡಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಸ್ವಾಗತಿಸಿ, ಜಮಾ ಖರ್ಚು ಹಾಗೂ ವಾರ್ಡು ಸಭೆಯ ವರದಿಯನ್ನು ಪಂ. ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ಮಂಡಿಸಿದರು.

Related posts

ಆ.30: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya

ಪ್ರೋ| ನಾ ವುಜಿರೆ ನಿಧನಕ್ಕೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಸಂತಾಪ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ದ.ಕ.ಜಿಲ್ಲಾ ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ನಿರ್ದೇಶಕರಾಗಿ ಗುರುಪ್ರಸಾದ್ ಆಯ್ಕೆ

Suddi Udaya

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya

ಧರ್ಮಸ್ಥಳ: ಹಲ್ಲೆ, ಜೀವ ಬೆದರಿಕೆ ಆರೋಪ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!