23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯತದ 2023-24 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಗ್ರಾಪಂ ಅಧ್ಯಕ್ಷೆ ವಿಮಲ ರವರ ಅಧ್ಯಕ್ಷತೆಯಲ್ಲಿ, ಧರ್ಮಸ್ಥಳ ಗ್ರಾಮ ಪಂಚಾಯತ್‌ ಸಭಾಭವನದಲ್ಲಿ ಮಾ.1 ರಂದು ನಡೆಯಿತು.
ನೋಡೆಲ್ ಅಧಿಕಾರಿಯಾಗಿ ಕೊಕ್ಕಡ ಹೋಬಳಿ ಕೇಂದ್ರದ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಗ್ರಾಮಸಭೆ ನಡೆಸಿಕೊಟ್ಟರು.

ಈ ವೇಳೆ ಇಲಾಖಾ ಅಧಿಕಾರಿಗಳು, ಆಶಾಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆ ಉಪಸ್ಥಿತರಿದ್ದು ಮಾಹಿತಿ ನೀಡಿದರು. ಗ್ರಾ.ಪಂ. ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗ್ರಾ.ಪಂ. ಸಿಬ್ಬಂದಿಗಳು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಗ್ರಾಮಸಭೆಯಲ್ಲಿ ಭಾಗವಹಿಸಿದರು.

ಗ್ರಾಮ ಸಭೆ ವರದಿ ಹಾಗೂ ಅನುಪಾಲನಾ ವರದಿಯನ್ನು ಗುಮಾಸ್ತ ದೇವಿಪ್ರಸಾದ್ ಬೊಳ್ಮ ಮಂಡಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಸ್ವಾಗತಿಸಿ, ಜಮಾ ಖರ್ಚು ಹಾಗೂ ವಾರ್ಡು ಸಭೆಯ ವರದಿಯನ್ನು ಪಂ. ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ಮಂಡಿಸಿದರು.

Related posts

ಜು.9: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಸುಲ್ಕೇರಿಮೊಗ್ರು: ಭಾರಿ ಮಳೆಗೆ ಮನೆಯ ಕಂಪೌಂಡ್ ಕುಸಿತ

Suddi Udaya

ಉಜಿರೆಯ ಎಸ್‌ಡಿಎಂ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವತಿಯಿಂದ “ಸಿನರ್ಜಿ” ವಿಭಾಗ ವಿದ್ಯಾರ್ಥಿ ವೇದಿಕೆಯ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ

Suddi Udaya
error: Content is protected !!