July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯತದ 2023-24 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಗ್ರಾಪಂ ಅಧ್ಯಕ್ಷೆ ವಿಮಲ ರವರ ಅಧ್ಯಕ್ಷತೆಯಲ್ಲಿ, ಧರ್ಮಸ್ಥಳ ಗ್ರಾಮ ಪಂಚಾಯತ್‌ ಸಭಾಭವನದಲ್ಲಿ ಮಾ.1 ರಂದು ನಡೆಯಿತು.
ನೋಡೆಲ್ ಅಧಿಕಾರಿಯಾಗಿ ಕೊಕ್ಕಡ ಹೋಬಳಿ ಕೇಂದ್ರದ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಗ್ರಾಮಸಭೆ ನಡೆಸಿಕೊಟ್ಟರು.

ಈ ವೇಳೆ ಇಲಾಖಾ ಅಧಿಕಾರಿಗಳು, ಆಶಾಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆ ಉಪಸ್ಥಿತರಿದ್ದು ಮಾಹಿತಿ ನೀಡಿದರು. ಗ್ರಾ.ಪಂ. ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗ್ರಾ.ಪಂ. ಸಿಬ್ಬಂದಿಗಳು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಗ್ರಾಮಸಭೆಯಲ್ಲಿ ಭಾಗವಹಿಸಿದರು.

ಗ್ರಾಮ ಸಭೆ ವರದಿ ಹಾಗೂ ಅನುಪಾಲನಾ ವರದಿಯನ್ನು ಗುಮಾಸ್ತ ದೇವಿಪ್ರಸಾದ್ ಬೊಳ್ಮ ಮಂಡಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಸ್ವಾಗತಿಸಿ, ಜಮಾ ಖರ್ಚು ಹಾಗೂ ವಾರ್ಡು ಸಭೆಯ ವರದಿಯನ್ನು ಪಂ. ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ಮಂಡಿಸಿದರು.

Related posts

ಬೆಳ್ತಂಗಡಿ : ಬಿಜೆಪಿ ಮಂಡಲದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

Suddi Udaya

ಕನ್ಯಾಡಿಯ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರಿಂದ ಮುಂಬಯಿ ಬಿಲ್ಲವ ಸಮುದಾಯ ಭವನ, ಗುರುಮಂದಿರ ಉದ್ಘಾಟನೆ

Suddi Udaya

ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರಥಮ್ ರವರಿಗೆ ರಾಜ್ಯ ಸರಕಾರಿ ನೌಕರರ ಸಹಕಾರಿ ಸಂಘದಿಂದ ಅಭಿನಂದನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಲಯ ಉಪಾಧ್ಯಕ್ಷ ಶಂಕರ್ ರಾವ್ ರವರಿಗೆ ಸನ್ಮಾನ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ–2 ಫಲಿತಾಂಶ: ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಯಾನ ಪೊನ್ನಮ್ಮ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

Suddi Udaya

ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!