23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ : ಎಸ್.ಡಿ.ಪಿ.ಐ ಪಕ್ಷ ಸಮಾವೇಶ

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ ಪಕ್ಷ ಸಮಾವೇಶವು ಮಾ.1ರಂದು ಬೆಳ್ತಂಗಡಿ ಗುರುನಾರಾಯಣ ಭವನದಲ್ಲಿ ನಡೆಯಿತು.

ಬೆಳ್ತಂಗಡಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಅಧ್ಯಕ್ಷ ನವಾಜ್ ಶರೀಫ್ ಕಟ್ಟೆ ಮಾತನಾಡಿ ಎಸ್.ಡಿ.ಪಿ.ಐ. ಯು ಸಂವಿಧಾನ ಬದ್ಧವಾಗಿ ಬಂದಂತಹ ಪಕ್ಷವಾಗಿದ್ದು ನಾವೆಲ್ಲರೂ ಸಕ್ರೀಯವಾಗಿ ಭಾಗವಹಿಸಬೇಕು. ಪಂಚಾಯತ್ ಚುನಾವಣೆಗಳು ಅಥವಾ ಮುಂಬರುವ ಚುನಾವಣೆಗಳಿರಬಹುದು ನಮ್ಮ ಪಕ್ಷದ ಸದಸ್ಯರುಗಳನ್ನು, ಅಭ್ಯರ್ಥಿಗಳನ್ನು ಗೆಲ್ಲಿಸುವ ಕೆಲಸ ಮಾಡಬೇಕು ಎಂದರು.

ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮೊಹಮ್ಮದ್ ಮಾತನಾಡಿ ಯಾವುದೇ ಸಾಮಾಜಿಕ ಕಾರ್ಯಕ್ರಮ, ಸಭೆಗಳಲ್ಲಿ ಅತ್ಯಂತ ಶಿಸ್ತಿನಲ್ಲಿ ಪಾಲ್ಗೊಳ್ಳುವ ಪಕ್ಷ ಎಸ್.ಡಿ.ಪಿ.ಐ., ಬೇರೆ ಬೇರೆ ಪಕ್ಷಗಳು ಈಗಾಗಲೇ ಚುನಾವಣಾ ತಯಾರಿ ಮಾಡಿಕೊಂಡಿದ್ದಾರೆ. ಪ್ರಜಾಪ್ರಭುತ್ವ ಅವನತಿಯಾಗುತ್ತಿರುವುದನ್ನು ಕಾಣುತ್ತಿದ್ದೇವೆ. ಕೋಮುಗಲಭೆಗಳನ್ನು ಬಿಜೆಪಿ ಮಾತ್ರವಲ್ಲ ಕಾಂಗ್ರೆಸ್ ಕೂಡ ಮಾಡುತ್ತಿದೆ ಎಂದರು.

ವೇದಿಕೆಯಲ್ಲಿ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು, ದ.ಕ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಬೆಳ್ತಂಗಡಿ ಎಸ್.ಡಿ.ಪಿ.ಐ ಉಪಾಧ್ಯಕ್ಷ ಅಬೂಬಕ್ಕರ್, ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವಮೆಂಟ್ ಅಧ್ಯಕ್ಷ ಶಾಮ ಮೊಹಮ್ಮದ್ ಅಲಿ, ಹನೀಫ್ ಪುಂಜಾಲಕಟ್ಟೆ, ಬೆಳ್ತಂಗಡಿ ಕಾರ್ಯದರ್ಶಿ ನಿಸಾರ್ ಕುದ್ರಡ್ಕ, ದ. ಕ. ಜಿಲ್ಲಾ ಸದಸ್ಯೆ ಸಫ ಸಲ್ಮಾ ಉಪಸ್ಥಿತರಿದ್ದರು.ಅಶ್ರಫ್ ಪುಂಜಾಲಕಟ್ಟೆ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಹತ್ಯಡ್ಕ: ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಪ್ರಮುಖ 2025: ಜಿಲ್ಲಾಮಟ್ಟದ ವಸ್ತುಪ್ರದರ್ಶನ ಹಾಗೂ ಅಂತರ ಕಾಲೇಜು ಉತ್ಸವ

Suddi Udaya

ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬಕ್ಕೆ ಲೈಟಿಂಗ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ 9 ನೇ ತರಗತಿ ವಿದ್ಯಾರ್ಥಿ ಸಾವು

Suddi Udaya

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಸ್ವಸ್ತಿ ಸಿರಿ ಪ್ರಶಸ್ತಿ ಪ್ರದಾನ

Suddi Udaya
error: Content is protected !!