23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ : ಎಸ್.ಡಿ.ಪಿ.ಐ ಪಕ್ಷ ಸಮಾವೇಶ

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ ಪಕ್ಷ ಸಮಾವೇಶವು ಮಾ.1ರಂದು ಬೆಳ್ತಂಗಡಿ ಗುರುನಾರಾಯಣ ಭವನದಲ್ಲಿ ನಡೆಯಿತು.

ಬೆಳ್ತಂಗಡಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಅಧ್ಯಕ್ಷ ನವಾಜ್ ಶರೀಫ್ ಕಟ್ಟೆ ಮಾತನಾಡಿ ಎಸ್.ಡಿ.ಪಿ.ಐ. ಯು ಸಂವಿಧಾನ ಬದ್ಧವಾಗಿ ಬಂದಂತಹ ಪಕ್ಷವಾಗಿದ್ದು ನಾವೆಲ್ಲರೂ ಸಕ್ರೀಯವಾಗಿ ಭಾಗವಹಿಸಬೇಕು. ಪಂಚಾಯತ್ ಚುನಾವಣೆಗಳು ಅಥವಾ ಮುಂಬರುವ ಚುನಾವಣೆಗಳಿರಬಹುದು ನಮ್ಮ ಪಕ್ಷದ ಸದಸ್ಯರುಗಳನ್ನು, ಅಭ್ಯರ್ಥಿಗಳನ್ನು ಗೆಲ್ಲಿಸುವ ಕೆಲಸ ಮಾಡಬೇಕು ಎಂದರು.

ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮೊಹಮ್ಮದ್ ಮಾತನಾಡಿ ಯಾವುದೇ ಸಾಮಾಜಿಕ ಕಾರ್ಯಕ್ರಮ, ಸಭೆಗಳಲ್ಲಿ ಅತ್ಯಂತ ಶಿಸ್ತಿನಲ್ಲಿ ಪಾಲ್ಗೊಳ್ಳುವ ಪಕ್ಷ ಎಸ್.ಡಿ.ಪಿ.ಐ., ಬೇರೆ ಬೇರೆ ಪಕ್ಷಗಳು ಈಗಾಗಲೇ ಚುನಾವಣಾ ತಯಾರಿ ಮಾಡಿಕೊಂಡಿದ್ದಾರೆ. ಪ್ರಜಾಪ್ರಭುತ್ವ ಅವನತಿಯಾಗುತ್ತಿರುವುದನ್ನು ಕಾಣುತ್ತಿದ್ದೇವೆ. ಕೋಮುಗಲಭೆಗಳನ್ನು ಬಿಜೆಪಿ ಮಾತ್ರವಲ್ಲ ಕಾಂಗ್ರೆಸ್ ಕೂಡ ಮಾಡುತ್ತಿದೆ ಎಂದರು.

ವೇದಿಕೆಯಲ್ಲಿ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು, ದ.ಕ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಬೆಳ್ತಂಗಡಿ ಎಸ್.ಡಿ.ಪಿ.ಐ ಉಪಾಧ್ಯಕ್ಷ ಅಬೂಬಕ್ಕರ್, ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವಮೆಂಟ್ ಅಧ್ಯಕ್ಷ ಶಾಮ ಮೊಹಮ್ಮದ್ ಅಲಿ, ಹನೀಫ್ ಪುಂಜಾಲಕಟ್ಟೆ, ಬೆಳ್ತಂಗಡಿ ಕಾರ್ಯದರ್ಶಿ ನಿಸಾರ್ ಕುದ್ರಡ್ಕ, ದ. ಕ. ಜಿಲ್ಲಾ ಸದಸ್ಯೆ ಸಫ ಸಲ್ಮಾ ಉಪಸ್ಥಿತರಿದ್ದರು.ಅಶ್ರಫ್ ಪುಂಜಾಲಕಟ್ಟೆ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್‍ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್: ಗ್ರಾಹಕರಿಗೆ ರೂ.10 ಸಾವಿರ ತನಕ ಉಳಿತಾಯ ಮಾಡುವ ಸುವರ್ಣ ಅವಕಾಶ

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya

ಕೊಕ್ಕಡ: ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ ಪ್ರಯುಕ್ತ ಗಣಹೋಮ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!