26.1 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯ ಪತ್ರಕರ್ತ ಮನೋಹರ ಪ್ರಸಾದ್‌ರವರ ನಿಧನಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ


ಧರ್ಮಸ್ಥಳ: ಹಿರಿಯ ಪತ್ರಕರ್ತರಾದ ಮನೋಹರ ಪ್ರಸಾದ್‌ರ ನಿಧನದ ಸುದ್ದಿ ತಿಳಿದು ವಿಷಾದವಾಯಿತು.
ಅನುಭವಿ ಪತ್ರಕರ್ತ, ಉತ್ತಮ ವಾಗ್ಮಿ, ಚಿಂತಕ ಹಾಗೂ ಆದರ್ಶ ಕಾರ್ಯಕ್ರಮ ನಿರ್ವಾಹಕ, ಸಹೃದಯಿಯಾದ ಅವರು ನಮ್ಮ ಕ್ಷೇತ್ರದ ಅಪಾರ ಅಭಿಮಾನಿಯೂ, ಭಕ್ತರೂ ಆಗಿದ್ದರು.


ಅವರ ಲೇಖನಗಳು ಅಧಿಕೃತ ಮಾಹಿತಿಯ ಕಣಜವಾಗಿದ್ದು, ಕುತೂಹಲದಿಂದ ಓದಿಸಿಕೊಂಡು ಹೋಗುತ್ತವೆ.
ಧರ್ಮಸ್ಥಳದಲ್ಲಿ ನಡೆಯುವ ಲಕ್ಷದೀಪೋತ್ಸವ, ಮಸ್ತಕಾಭಿಷೇಕ, ಮಹಾನಡಾವಳಿ, ಉಜಿರೆಯಲ್ಲಿ ನಡೆದ ವಿಶ್ವತುಳುಸಮ್ಮೇಳನ, ಕೃಷಿಮೇಳ, ಮೊದಲಾದ ಸಂದರ್ಭಗಳಲ್ಲಿ ಅವರು ಉದಯವಾಣಿಯಲ್ಲಿ ವಿಶೇಷ ಲೇಖನ, ಪುರವಣಿಗಳನ್ನು ಪ್ರಕಟಿಸಿ ಉತ್ತಮ ಸೇವೆ ನೀಡಿದ್ದಾರೆ.


ಅವರು ಹೇಳಿದ ಒಂದು ಸಂದರ್ಭ ನನಗೆ ಸದಾ ನೆನಪಿನಲ್ಲಿದೆ. ಒಮ್ಮೆ ರಾಮ, ಲಕ್ಷ್ಮಣರು ಕೇರಳಕ್ಕೆ ಹೋದಾಗ, ರಾಮನಿಗೆ ಬಾಯಾರಿಕೆಯಾಯಿತಂತೆ ಆಗ ಲಕ್ಷ್ಮಣನಲ್ಲಿ ನೀರು ತಂದುಕೊಡಲು ಹೇಳಿದ. ಒಮ್ಮೆ ಆಗುವುದಿಲ್ಲ ಎಂದು ಹೇಳಿದ ಲಕ್ಷ್ಮಣ, ಕೊಂಚ ಸಮಯದ ಬಳಿಕ ನೀರು ತಂದುಕೊಟ್ಟ. ಹೀಗೆ ಒಮ್ಮೆಲೆ ಒಪ್ಪಿಕೊಳ್ಳುವ ಬದಲು ಮೊದಲು ಪ್ರತಿಭಟಿಸಿ, ಮತ್ತೆ ಕಾರ್ಯ ಮಾಡುವುದು. ತುಂಬಾ ಪರಿಣಾಮಕಾರಿಯಾಗಿದೆ ಎಂಬುದು ಇದರ ತಾತ್ಪರ್ಯ.


ಅವರ ನಿಧನ ಪತ್ರಿಕಾರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದರು.

Related posts

ಮುಂಡಾಜೆ ಹಿ. ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ. ರಿಗೆ ರಾಷ್ಟ್ರ ಮಟ್ಟದ ಗೋಲ್ಡನ್ ಆರೋ ಪ್ರಶಸ್ತಿ

Suddi Udaya

ಗಡಾಯಿಕಲ್ಲು ಚಾರಣಕ್ಕೆ ಮುಂದಿನ ಆದೇಶದವರೆಗೆ ನಿಷೇಧ

Suddi Udaya

ಶಾಲಾ ವಾಹನ ಹಾಗೂ ಕಾರ್ ನಡುವೆ ರಸ್ತೆ ಅಪಘಾತ

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಚೆಕ್ ವಿತರಣೆ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya

ಭಜನಾ ಪರಿಷತ್ ಲಾಯಿಲ ವಲಯದ ಅಧ್ಯಕ್ಷರಾಗಿ ಪಿ. ಚಂದ್ರಶೇಖರ ಸಾಲ್ಯಾನ್, ಕಾರ್ಯದರ್ಶಿಯಾಗಿ ಅಖಿಲೇಶ್ ಚಂದ್ಕೂರು, ಕೋಶಾಧಿಕಾರಿಯಾಗಿ ದಿನೇಶ್ ಜಾನ್ಲಪು

Suddi Udaya
error: Content is protected !!