25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯ ಪತ್ರಕರ್ತ ಮನೋಹರ ಪ್ರಸಾದ್‌ರವರ ನಿಧನಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ


ಧರ್ಮಸ್ಥಳ: ಹಿರಿಯ ಪತ್ರಕರ್ತರಾದ ಮನೋಹರ ಪ್ರಸಾದ್‌ರ ನಿಧನದ ಸುದ್ದಿ ತಿಳಿದು ವಿಷಾದವಾಯಿತು.
ಅನುಭವಿ ಪತ್ರಕರ್ತ, ಉತ್ತಮ ವಾಗ್ಮಿ, ಚಿಂತಕ ಹಾಗೂ ಆದರ್ಶ ಕಾರ್ಯಕ್ರಮ ನಿರ್ವಾಹಕ, ಸಹೃದಯಿಯಾದ ಅವರು ನಮ್ಮ ಕ್ಷೇತ್ರದ ಅಪಾರ ಅಭಿಮಾನಿಯೂ, ಭಕ್ತರೂ ಆಗಿದ್ದರು.


ಅವರ ಲೇಖನಗಳು ಅಧಿಕೃತ ಮಾಹಿತಿಯ ಕಣಜವಾಗಿದ್ದು, ಕುತೂಹಲದಿಂದ ಓದಿಸಿಕೊಂಡು ಹೋಗುತ್ತವೆ.
ಧರ್ಮಸ್ಥಳದಲ್ಲಿ ನಡೆಯುವ ಲಕ್ಷದೀಪೋತ್ಸವ, ಮಸ್ತಕಾಭಿಷೇಕ, ಮಹಾನಡಾವಳಿ, ಉಜಿರೆಯಲ್ಲಿ ನಡೆದ ವಿಶ್ವತುಳುಸಮ್ಮೇಳನ, ಕೃಷಿಮೇಳ, ಮೊದಲಾದ ಸಂದರ್ಭಗಳಲ್ಲಿ ಅವರು ಉದಯವಾಣಿಯಲ್ಲಿ ವಿಶೇಷ ಲೇಖನ, ಪುರವಣಿಗಳನ್ನು ಪ್ರಕಟಿಸಿ ಉತ್ತಮ ಸೇವೆ ನೀಡಿದ್ದಾರೆ.


ಅವರು ಹೇಳಿದ ಒಂದು ಸಂದರ್ಭ ನನಗೆ ಸದಾ ನೆನಪಿನಲ್ಲಿದೆ. ಒಮ್ಮೆ ರಾಮ, ಲಕ್ಷ್ಮಣರು ಕೇರಳಕ್ಕೆ ಹೋದಾಗ, ರಾಮನಿಗೆ ಬಾಯಾರಿಕೆಯಾಯಿತಂತೆ ಆಗ ಲಕ್ಷ್ಮಣನಲ್ಲಿ ನೀರು ತಂದುಕೊಡಲು ಹೇಳಿದ. ಒಮ್ಮೆ ಆಗುವುದಿಲ್ಲ ಎಂದು ಹೇಳಿದ ಲಕ್ಷ್ಮಣ, ಕೊಂಚ ಸಮಯದ ಬಳಿಕ ನೀರು ತಂದುಕೊಟ್ಟ. ಹೀಗೆ ಒಮ್ಮೆಲೆ ಒಪ್ಪಿಕೊಳ್ಳುವ ಬದಲು ಮೊದಲು ಪ್ರತಿಭಟಿಸಿ, ಮತ್ತೆ ಕಾರ್ಯ ಮಾಡುವುದು. ತುಂಬಾ ಪರಿಣಾಮಕಾರಿಯಾಗಿದೆ ಎಂಬುದು ಇದರ ತಾತ್ಪರ್ಯ.


ಅವರ ನಿಧನ ಪತ್ರಿಕಾರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದರು.

Related posts

ಮಡಂತ್ಯಾರು: ಮೂಡಯೂರು ರಸ್ತೆ ಬದಿ ಸ್ವಚ್ಛತಾ ಕಾರ್ಯ

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದ ಮಹಾಸಭೆ: ಅಧ್ಯಕ್ಷರಾಗಿ ಸದಾನಂದ ಬಿ., ಕಾರ್ಯದರ್ಶಿಯಾಗಿ ಉಮೇಶ್ ಆಚಾರ್ಯ ಆಯ್ಕೆ

Suddi Udaya

ಮಡಂತ್ಯಾರು: ಸಾಲುಮರ ಬಳಿ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ ಕೇವಲ ಎರಡೇ ದಿನಗಳು ಬಾಕಿ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸೈಂಟ್ ಫ್ರಾನ್ಸಿಸ್ ಆಂ.ಮಾ. ಶಾಲೆಗೆ ಶೇ.100 ಫಲಿತಾಂಶ

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಮಾ। ರಿತ್ವಿಕ್‌ರಾಜ್ ಅಂಡಿಂಜೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

Suddi Udaya
error: Content is protected !!