April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ: ಪೆರಿಂಜೆ ಮಲಿಯಾಳ ಪಲ್ಕೆಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಹೊಸಂಗಡಿ : ಪೆರಿಂಜೆ ಮಲಿಯಾಳ ಪಲ್ಕೆ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ ನಡೆದ್ದಿದ್ದು ಈ ಬಗ್ಗೆ ಫೆ.29ರಂದು ವರದಿಯಾಗಿದೆ.

ಬೆಳ್ತಂಗಡಿ ತಾಲೂಕು ಹೊಸಂಗಡಿ ಗ್ರಾಮದ ಪೆರಿಂಜೆ ಮಲಿಯಾಳ ಪಲ್ಕೆ ಎಂಬಲ್ಲಿ ಆರಂಬೋಡಿ – ಪಡ್ಯಾರಬೆಟ್ಟು ಸಾರ್ವಜನಿಕ ಡಾಮಾರು ರಸ್ತೆಯಲ್ಲಿ ಬೊಳ್ಳಾಜೆ ಎಂಬಲ್ಲಿಂದ ಶಾಂತಿಕಾಡು ಕಡೆಗೆ ವಸಂತರವರು ಸಹಸವಾರರಾಗಿ ಸವಾರಿ ಮಾಡಿಕೊಂಡು ಬರುತ್ತಿದ್ದ ದ್ವಿಚಕ್ರ ವಾಹನ ನಂ: ಕೆಎ 19 ಹೆಚ್‌ ಎನ್‌ 0984 ನೇದನ್ನು ಆರೋಪಿತ ಸವಾರ ಎಡ್ವರ್ಡ್‌ ಎಂಬವರು ಇಳಿಜಾರು ಹಾಗೂ ಕಿರಿದಾದ ಪ್ರದೇಶದಲ್ಲಿ ಎದುರಿನಿಂದ ಅಂದರೆ ಪಡ್ಯಾರಬೆಟ್ಟು ಕಡೆಯಿಂದ ಬರುತ್ತಿದ್ದ ಟಿಪ್ಪರ್‌ ಲಾರಿಯನ್ನು ಕಂಡು ಒಮ್ಮೆಲೆ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ರಸ್ತೆಯ ತೀರಾ ಎಡಬದಿಗೆ ಚಲಾಯಿಸಿದ ಪರಿಣಾಮ ದ್ವಿಚಕ್ರ ವಾಹನವು ಡಾಮಾರು ರಸ್ತೆಯ ಅಂಚಿನಲ್ಲಿ ಅಂದರೆ ತಗ್ಗು(ಗುಂಡಿ) ಪ್ರದೇಶದಲ್ಲಿ ಚಲಾಯಿಸಿದಾಗ ಸಹಸವಾರರಾಗಿ ಕುಳಿತಿದ್ದ ವಸಂತರವರ ಹಿಡಿತ ತಪ್ಪಿ ದ್ವಿಚಕ್ರ ವಾಹನದಿಂದ ರಸ್ತೆಗೆ ಕುಸಿದು ಬಿದ್ದು, ಬೆನ್ನಿಗೆ ಗುದ್ದಿದ ಪರಿಣಾಮ ತೀವ್ರ ನೋವುಂಟಾದವರನ್ನು ಆರೋಪಿ ಸವಾರ ಹಾಗೂ ಇತರರು ಸೇರಿ ಖಾಸಗಿ ವಾಹನದಲ್ಲಿ ಕಾರ್ಕಳದ ಸ್ಪಂದನಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿರುತ್ತಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

Related posts

ಮೆಸ್ಕಾಂ ಬೆಳ್ತಂಗಡಿ ಉಪವಿಭಾಗದ ಸ.ಕಾ ಅಭಿಯಂತರ ಶಿವಶಂಕರ್ ಪುತ್ತೂರಿಗೆ ವರ್ಗಾವಣೆ

Suddi Udaya

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ವಲಯ ಬಂಟರ ಸಂಘ, ಉಜಿರೆ ಹಾಗೂ ಬಂಟರ ಗ್ರಾಮ ಸಮಿತಿ ಉಜಿರೆ ಮುಂಡಾಜೆ ಮತ್ತು ತೋಟತ್ತಾಡಿ ಇವುಗಳ ಸಹಭಾಗಿತ್ವದಲ್ಲಿ ಉಜಿರೆ ವಲಯ ಬಂಟರ ಕ್ರೀಡಾಕೂಟ

Suddi Udaya

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ನಿಡ್ಲೆ: ಅಕ್ರಮ ವೈನ್ ದಾಸ್ತಾನು ಸ್ಟೋರ್ ಮೇಲೆ ಬೆಳ್ತಂಗಡಿ ಅಬಕಾರಿ ದಾಳಿ ರೂ.2 ಲಕ್ಷ ಮೌಲ್ಯದ ವೈನ್ ವಶ

Suddi Udaya

ಮುಳಿಯ ಜುವೆಲ್ಸ್ ನಲ್ಲಿ “ಕನ್ನಡ ಬದುಕು ಬಂಗಾರ” ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಮೈಲಿ ವರ್ಲ್ಡ್ ಮಕ್ಕಳ ಪಾಕ್೯ ಉದ್ಘಾಟನೆ

Suddi Udaya
error: Content is protected !!