25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ: ಪೆರಿಂಜೆ ಮಲಿಯಾಳ ಪಲ್ಕೆಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಹೊಸಂಗಡಿ : ಪೆರಿಂಜೆ ಮಲಿಯಾಳ ಪಲ್ಕೆ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ ನಡೆದ್ದಿದ್ದು ಈ ಬಗ್ಗೆ ಫೆ.29ರಂದು ವರದಿಯಾಗಿದೆ.

ಬೆಳ್ತಂಗಡಿ ತಾಲೂಕು ಹೊಸಂಗಡಿ ಗ್ರಾಮದ ಪೆರಿಂಜೆ ಮಲಿಯಾಳ ಪಲ್ಕೆ ಎಂಬಲ್ಲಿ ಆರಂಬೋಡಿ – ಪಡ್ಯಾರಬೆಟ್ಟು ಸಾರ್ವಜನಿಕ ಡಾಮಾರು ರಸ್ತೆಯಲ್ಲಿ ಬೊಳ್ಳಾಜೆ ಎಂಬಲ್ಲಿಂದ ಶಾಂತಿಕಾಡು ಕಡೆಗೆ ವಸಂತರವರು ಸಹಸವಾರರಾಗಿ ಸವಾರಿ ಮಾಡಿಕೊಂಡು ಬರುತ್ತಿದ್ದ ದ್ವಿಚಕ್ರ ವಾಹನ ನಂ: ಕೆಎ 19 ಹೆಚ್‌ ಎನ್‌ 0984 ನೇದನ್ನು ಆರೋಪಿತ ಸವಾರ ಎಡ್ವರ್ಡ್‌ ಎಂಬವರು ಇಳಿಜಾರು ಹಾಗೂ ಕಿರಿದಾದ ಪ್ರದೇಶದಲ್ಲಿ ಎದುರಿನಿಂದ ಅಂದರೆ ಪಡ್ಯಾರಬೆಟ್ಟು ಕಡೆಯಿಂದ ಬರುತ್ತಿದ್ದ ಟಿಪ್ಪರ್‌ ಲಾರಿಯನ್ನು ಕಂಡು ಒಮ್ಮೆಲೆ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ರಸ್ತೆಯ ತೀರಾ ಎಡಬದಿಗೆ ಚಲಾಯಿಸಿದ ಪರಿಣಾಮ ದ್ವಿಚಕ್ರ ವಾಹನವು ಡಾಮಾರು ರಸ್ತೆಯ ಅಂಚಿನಲ್ಲಿ ಅಂದರೆ ತಗ್ಗು(ಗುಂಡಿ) ಪ್ರದೇಶದಲ್ಲಿ ಚಲಾಯಿಸಿದಾಗ ಸಹಸವಾರರಾಗಿ ಕುಳಿತಿದ್ದ ವಸಂತರವರ ಹಿಡಿತ ತಪ್ಪಿ ದ್ವಿಚಕ್ರ ವಾಹನದಿಂದ ರಸ್ತೆಗೆ ಕುಸಿದು ಬಿದ್ದು, ಬೆನ್ನಿಗೆ ಗುದ್ದಿದ ಪರಿಣಾಮ ತೀವ್ರ ನೋವುಂಟಾದವರನ್ನು ಆರೋಪಿ ಸವಾರ ಹಾಗೂ ಇತರರು ಸೇರಿ ಖಾಸಗಿ ವಾಹನದಲ್ಲಿ ಕಾರ್ಕಳದ ಸ್ಪಂದನಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿರುತ್ತಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

Related posts

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಮನೋಜ್ ಪಟ್ರಮೆ ಆಯ್ಕೆ

Suddi Udaya

ಜ.3 -4: ನಲಿಕೆ ಸಮಾಜ ಬಾಂಧವರ 5 ಓವರ್‌ಗಳ 7 ಜನರ ಹೊನಲು ಬೆಳಕಿನ ಸೂಪರ್ ಸಿಕ್ಸ್ ಅಂಡರ್ ಆರ್ಮ್ ಕ್ರಿಕೆಟ್‌ ಪಂದ್ಯಾಟ : ಮಾರಿಗುಡಿ ಫ್ರೆಂಡ್ಸ್ ಟ್ರೋಫಿ – 2026

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತ್ ನಲ್ಲಿ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಎಂ.ಕೆ. ಅಹ್ಮದ್ ಯೂಸುಫ್ ರವರಿಗೆ ಗೌರವಾರ್ಪಣೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಅನುದಾನದಲ್ಲಿ ಹೊಸ್ತೋಟ ಅಂಗನವಾಡಿ ಕೇಂದ್ರಕ್ಕೆ ಸುಣ್ಣ ಬಣ್ಣ, ಗೋಡೆ ಬರಹ, ವರ್ಣ ರಂಜಿತ ಚಿತ್ರ

Suddi Udaya

ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ, ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆಒಲಿದು ಬಂದ “ಭಾರತೀಯ ಶಿಕ್ಷಣ ರತ್ನ ಪ್ರಶಸ್ತಿ -2025”

Suddi Udaya

ಇಂದಬೆಟ್ಟು: ಗೋಮಾಂಸ ಮಾಡುತ್ತಿದ್ದ ಶೆಡ್ ಮೇಲೆ ಪೊಲೀಸ್ ದಾಳಿ: ಇಬ್ಬರು ಆರೋಪಿಗಳ ಬಂಧನ

Suddi Udaya
error: Content is protected !!